AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ಆರತಿ ಕಾರ್ಯಕ್ರಮದ ಬಗ್ಗೆ ಮತ್ತಷ್ಟು ಅಪ್ಡೇಟ್​ಗಳನ್ನು ನೀಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ಕಾವೇರಿ ಆರತಿ ಕಾರ್ಯಕ್ರಮದ ಬಗ್ಗೆ ಮತ್ತಷ್ಟು ಅಪ್ಡೇಟ್​ಗಳನ್ನು ನೀಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ
|

Updated on: May 24, 2025 | 7:50 PM

ಕಾವೇರಿ ನದಿಯು ತಮಿಳುನಾಡು, ಕೇರಳ ಮತ್ತು ಪುದುಚೇರಿ ರಾಜ್ಯಗಳಲ್ಲೂ ಹರಿದು ಹೋಗುವುದರಿಂದ ಈ ರಾಜ್ಯಗಳ ಜನ ಸಹ ಭಾಗವಹಿಸಲು ಅವಕಾಶ ಕಲ್ಪಿಸಲಾಗುತ್ತದೆ, ಸುಮಾರು 10,000 ಜನ ಕೂತು ವೀಕ್ಷಿಸಲು ಸಾಧ್ಯವಾಗುವ ಹಾಗೆ ಗ್ಯಾಲರಿಯನ್ನು ವಿನ್ಯಾಸಗೊಳಿಸಲಾಗುತ್ತಿದೆ, ಭಾವೈಕ್ಯತೆಯ ಹಾಡೊಂದನ್ನು ರಚಿಸಲು ಅರ್ಜುನ್ ಜನ್ಯಾ ಮತ್ತು ಹಂಸಲೇಖಾ ಅವರನ್ನು ಕೋರಲಾಗಿದೆ ಎಂದು ಶಿವಕುಮಾರ್ ಹೇಳಿದರು.

ಬೆಂಗಳೂರು, ಮೇ 24: ಕಾವೇರಿ ಆರತಿಗೆ (Cauvery Aarathi) ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಭೆಯೊಂದನ್ನು ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತಾಡಿ, ರಾಜ್ಯದ ಮಠಮಾನ್ಯಗಳು, ವಿದ್ವಾಂಸರನ್ನು ಒಳಗೊಂಡಂತೆ, ಕರ್ನಾಟಕದ ಇತಿಹಾಸ, ನಾಡು-ನುಡಿ, ಪರಂಪರೆ, ಸಂಸ್ಕೃತಿಯನ್ನು ಬಿಂಬಿಸುವ ಕಾರ್ಯಕ್ರಮವನ್ನು ರೂಪಿಸುತ್ತಿದ್ದೇವೆ ಎಂದು ಹೇಳಿದರು. ಗಂಗಾ ಆರತಿ ಮಾದರಿಯ ಕಾವೇರಿ ಆರತಿ ಕಾರ್ಯಕ್ರಮಕ್ಕಾಗಿ ಕಾವೇರಿ ನಿಗಮದಿಂದ ₹92 ಕೋಟಿ ತೆಗೆದಿರಿಸಲಾಗಿದೆ , ಇಂಧನ, ಪ್ರವಾಸೋದ್ಯಮ ಮತ್ತು ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಕೂಡ ನಮ್ಮ ಜೊತೆ ಕೈ ಜೋಡಿಸುತ್ತಿವೆ ಎಂದು ಶಿವಕುಮಾರ್ ಹೇಳಿದರು. ಕಾವೇರಿ ಆರತಿ ವೇದಿಕೆ ನಿರ್ಮಾಣಕ್ಕೆ ಶೀಘ್ರದಲ್ಲೇ ಟೆಂಡರ್ ಕರೆಯಲಾಗುವುದು ಎಂದು ಅವರು ತಿಳಿಸಿದರು.

ಇದನ್ನೂ ಓದಿ:  ಅವರ ಜಮೀನುಗಳಿಗೆ ಬೆಲೆ ಏರಬಹುದು: ರಾಮನಗರ ಹೆಸರು ಬದಲಾವಣೆಗೆ ಡಿಕೆ ಶಿವಕುಮಾರ್ ವಿರುದ್ಧ ಕುಮಾರಸ್ವಾಮಿ ಕಿಡಿ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ