ನಮಸ್ತೇ ಸದಾ ವತ್ಸಲೇ: ವಿಧಾನಸಭೆಯಲ್ಲಿ RSS ಗೀತೆ ಹಾಡಿದ ಡಿಕೆ ಶಿವಕುಮಾರ್

Updated on: Aug 21, 2025 | 9:38 PM

ಆರ್​​ ಸಿಬಿ ಗೆಲುವಿನಲ್ಲಿ ಡಿಕೆ ಶಿವಕುಮಾರ್ ಪಾಲ್ಗೊಂಡಿರುವ ಬಗ್ಗೆ ಪ್ರಸ್ತಾಪ ಮಾಡಿದರು. ಇದಕ್ಕೆ ಎದ್ದು ನಿಂತ ಡಿಕೆಶಿ, ನಾನು ಕ್ರಿಕೆಟ್ ಅಭಿಮಾನಿ , ಕೆಎಸ್​ ಸಿಎ ಸದಸ್ಯ, ಕ್ರೀಡಾಂಗಣಕ್ಕೆ ಹೋಗಿದ್ದೆ. ಕಫ್ ಗೂ ಮುತ್ತು ಕೊಟ್ಟಿದ್ದೆನೆ ಎಂದರು. ನಂತರ ಕೌಂಟರ್ ಎಂಬಂತೆ ಆರ್​ ಎಸ್​ ಎಸ್​ ಚಡ್ಡಿ ಹಾಕಿರುವುದನ್ನೂ ಸಹ ಹೇಳಿ ಎಂದ ಅಶೋಕ್ ಟಾಂಕ್ ಕೊಟ್ಟರು. ಇದಕ್ಕೆ ಪ್ರತಿಯಾಗಿ ಡಿಕೆಶಿ, ನಮಸ್ತೆ ಸದಾ ವತ್ಸಲೆ ಎಂದು ಆರ್​ ಎಸ್​ ಎಸ್​ ಗೀತೆ ಹಾಡಿ ಗಮನಸೆಳೆದರು.

ಬೆಂಗಳೂರು, (ಆಗಸ್ಟ್ 21): ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿಜಯೋತ್ಸವ ಸಂಭ್ರಮಾಚರಣೆ ವೇಲೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಆರ್​ ಸಿಬಿ ಅಭಿಮಾನಿಗಳು ಮೃತಟ್ಟಿದ್ದಾರೆ. ಈ ಸಂಬಂಧ ಇಂದು (ಆಗಸ್ಟ್ 21) ವಿಧಾನಸಭೆಯಲ್ಲಿ ಚರ್ಚೆ ನಡೆದಿದ್ದು, ಈ ಬಗ್ಗೆ ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರು ಉತ್ತರ ನೀಡಿದರು. ಇದೇ ವೇಳೆ ವಿಪಕ್ಷ ನಾಯಕ ಅಶೋಕ್, ಆರ್​​ ಸಿಬಿ ಗೆಲುವಿನಲ್ಲಿ ಡಿಕೆ ಶಿವಕುಮಾರ್ ಪಾಲ್ಗೊಂಡಿರುವ ಬಗ್ಗೆ ಪ್ರಸ್ತಾಪ ಮಾಡಿದರು. ಇದಕ್ಕೆ ಎದ್ದು ನಿಂತ ಡಿಕೆಶಿ, ನಾನು ಕ್ರಿಕೆಟ್ ಅಭಿಮಾನಿ , ಕೆಎಸ್​ ಸಿಎ ಸದಸ್ಯ, ಕ್ರೀಡಾಂಗಣಕ್ಕೆ ಹೋಗಿದ್ದೆ. ಕಫ್ ಗೂ ಮುತ್ತು ಕೊಟ್ಟಿದ್ದೆನೆ ಎಂದರು. ನಂತರ ಕೌಂಟರ್ ಎಂಬಂತೆ ಆರ್​ ಎಸ್​ ಎಸ್​ ಚಡ್ಡಿ ಹಾಕಿದ್ರಲ್ಲ ಎಂದು ಅಶೋಕ್ ಟಾಂಗ್ ಕೊಟ್ಟರು. ಇದಕ್ಕೆ ಪ್ರತಿಯಾಗಿ ಡಿಕೆಶಿ, ನಮಸ್ತೇ ಸದಾ ವತ್ಸಲೇ ಎಂದು ಆರ್​ ಎಸ್​ ಎಸ್​ ಗೀತೆ ಹಾಡಿದರು. ಈ ಮೂಲಕ ಅಶೋಕ್ ಅವರಿಗೆ ತಿರುಗೇಟು ನೀಡಿದರು.

Published on: Aug 21, 2025 09:31 PM
Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More