AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಪಿಎಲ್ ಫೈನಲ್: ಅರ್​ಸಿಬಿ ಜೆರ್ಸಿ ತೊಟ್ಟು ತಂಡಕ್ಕೆ ಶುಭ ಹಾರೈಸಿ ಕಪ್ ತೆಗೆದುಕೊಂಡು ಬನ್ನಿ ಎಂದ ಡಿಕೆ ಶಿವಕುಮಾರ್

ಐಪಿಎಲ್ ಫೈನಲ್: ಅರ್​ಸಿಬಿ ಜೆರ್ಸಿ ತೊಟ್ಟು ತಂಡಕ್ಕೆ ಶುಭ ಹಾರೈಸಿ ಕಪ್ ತೆಗೆದುಕೊಂಡು ಬನ್ನಿ ಎಂದ ಡಿಕೆ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ
|

Updated on: Jun 03, 2025 | 11:25 AM

ನಿನ್ನೆಯೂ ಸಭೆಯೊಂದನ್ನು ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತಾಡಿದ್ದ ಡಿಕೆ ಶಿವಕುಮಾರ್ ಆರ್​ಸಿಬಿ ತಂಡಕ್ಕೆ ಶುಭ ಹಾರೈಸಿದ್ದರು. ಡಿಸಿಎಂ ಹೇಳಿದ ಹಾಗೆ ಅರ್​ಸಿಬಿ ತಂಡಕ್ಕೆ ಭಾರತ ಮಾತ್ರವಲ್ಲ ವಿಶ್ವಾದಾದ್ಯಂತ ಅಭಿಮಾನಿಗಳಿದ್ದಾರೆ. ಟೀಮಿನ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಮುಂದಿನ ಐಪಿಎಲ್ ಸೀಸನ್ ಆಡುತ್ತಾರೋ ಇಲ್ಲವೋ ಗೊತ್ತಿಲ್ಲ, ಹಾಗಾಗಿ ಈ ಸಲ ಟಾಟಾ ಐಪಿಎಲ್ ಕಪ್ ಬೆಂಗಳೂರು ತಂಡ ಗೆಲ್ಲಲೇಬೇಕಿದೆ.

ಬೆಂಗಳೂರು, ಜೂನ್ 3: ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DCN DK Shivakumar) ಕ್ರಿಕೆಟ್ ಪ್ರೇಮಿ ಮತ್ತು ಕಾಲೇಜು ದಿನಗಳಲ್ಲಿ ಆಟ ಆಡಿದ್ದೂ ಉಂಟು. ಅವರು ಆರ್​ಸಿಬಿ ಟೀಮಿನ ದೊಡ್ಡ ಅಭಿಮಾನಿಯೂ ಹೌದು. ಇವತ್ತು ಬೆಂಗಳೂರಿನ ತಂಡ ಐಪಿಎಲ್ 18ನೇ ಸೀಸನ್​ನ ಫೈನಲ್ ಆಡಲಿರುವ ಸಂದರ್ಭದಲ್ಲಿ ಶಿವಕುಮಾರ್ ಟೀಮಿಗೆ ಶುಭ ಹಾರೈಸಿದ್ದಾರೆ. ಆಟಗಾರರನ್ನು ಹುರಿದುಂಬಿಸಲು ಅವರು ಅರ್​ಸಿಬಿ ಜೆರ್ಸಿ ತೊಟ್ಟಿರುವುದು ವಿಶೇಷ. ಕಳೆದ 18 ವರ್ಷಗಳಿಂದ ಆರ್​​ಸಿಬಿ ತಂಡ ಐಪಿಎಲ್ ಚಾಂಪಿಯನ್​ಶಿಪ್ ಗೆಲ್ಲಲಿ ಅಂತ ಹಾರೈಸುತ್ತಿದ್ದೇವೆ, ಇವತ್ತು ಮತ್ತೊಂದು ಅವಕಾಶ, ಇಡೀ ಕರ್ನಾಟಕ ಮಾತ್ರ ಅಲ್ಲ ಭಾರತವೂ ನಿಮ್ಮೊಂದಿಗಿದೆ, ನಿಮ್ಮ ಪರಿಶ್ರಮ ಗಮನಿಸುತ್ತಿದ್ದೇವೆ, ಗೆಲುವು ನಿಮ್ಮದೇ, ಈ ಸಲ ಕಪ್ ನಮ್ದೇ ಎಂದು ಶಿವಕುಮಾರ್ ಟೀಮಿಗೆ ಸಾಮಾಜಿಕ ಜಾಲತಾಣವೊಂದರ ಮೂಲಕ ಹಾರೈಸಿದ್ದಾರೆ.

ಇದನ್ನೂ ಓದಿ:  Virat Kohli Retirement: ಶಾಕಿಂಗ್: ಇಂದು ಆರ್​ಸಿಬಿ ಟ್ರೋಫಿ ಗೆದ್ದರೆ ಐಪಿಎಲ್​ಗೂ ವಿರಾಟ್ ಕೊಹ್ಲಿ ನಿವೃತ್ತಿ?

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ