ಐಪಿಎಲ್ ಫೈನಲ್: ಅರ್ಸಿಬಿ ಜೆರ್ಸಿ ತೊಟ್ಟು ತಂಡಕ್ಕೆ ಶುಭ ಹಾರೈಸಿ ಕಪ್ ತೆಗೆದುಕೊಂಡು ಬನ್ನಿ ಎಂದ ಡಿಕೆ ಶಿವಕುಮಾರ್
ನಿನ್ನೆಯೂ ಸಭೆಯೊಂದನ್ನು ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತಾಡಿದ್ದ ಡಿಕೆ ಶಿವಕುಮಾರ್ ಆರ್ಸಿಬಿ ತಂಡಕ್ಕೆ ಶುಭ ಹಾರೈಸಿದ್ದರು. ಡಿಸಿಎಂ ಹೇಳಿದ ಹಾಗೆ ಅರ್ಸಿಬಿ ತಂಡಕ್ಕೆ ಭಾರತ ಮಾತ್ರವಲ್ಲ ವಿಶ್ವಾದಾದ್ಯಂತ ಅಭಿಮಾನಿಗಳಿದ್ದಾರೆ. ಟೀಮಿನ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಮುಂದಿನ ಐಪಿಎಲ್ ಸೀಸನ್ ಆಡುತ್ತಾರೋ ಇಲ್ಲವೋ ಗೊತ್ತಿಲ್ಲ, ಹಾಗಾಗಿ ಈ ಸಲ ಟಾಟಾ ಐಪಿಎಲ್ ಕಪ್ ಬೆಂಗಳೂರು ತಂಡ ಗೆಲ್ಲಲೇಬೇಕಿದೆ.
ಬೆಂಗಳೂರು, ಜೂನ್ 3: ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DCN DK Shivakumar) ಕ್ರಿಕೆಟ್ ಪ್ರೇಮಿ ಮತ್ತು ಕಾಲೇಜು ದಿನಗಳಲ್ಲಿ ಆಟ ಆಡಿದ್ದೂ ಉಂಟು. ಅವರು ಆರ್ಸಿಬಿ ಟೀಮಿನ ದೊಡ್ಡ ಅಭಿಮಾನಿಯೂ ಹೌದು. ಇವತ್ತು ಬೆಂಗಳೂರಿನ ತಂಡ ಐಪಿಎಲ್ 18ನೇ ಸೀಸನ್ನ ಫೈನಲ್ ಆಡಲಿರುವ ಸಂದರ್ಭದಲ್ಲಿ ಶಿವಕುಮಾರ್ ಟೀಮಿಗೆ ಶುಭ ಹಾರೈಸಿದ್ದಾರೆ. ಆಟಗಾರರನ್ನು ಹುರಿದುಂಬಿಸಲು ಅವರು ಅರ್ಸಿಬಿ ಜೆರ್ಸಿ ತೊಟ್ಟಿರುವುದು ವಿಶೇಷ. ಕಳೆದ 18 ವರ್ಷಗಳಿಂದ ಆರ್ಸಿಬಿ ತಂಡ ಐಪಿಎಲ್ ಚಾಂಪಿಯನ್ಶಿಪ್ ಗೆಲ್ಲಲಿ ಅಂತ ಹಾರೈಸುತ್ತಿದ್ದೇವೆ, ಇವತ್ತು ಮತ್ತೊಂದು ಅವಕಾಶ, ಇಡೀ ಕರ್ನಾಟಕ ಮಾತ್ರ ಅಲ್ಲ ಭಾರತವೂ ನಿಮ್ಮೊಂದಿಗಿದೆ, ನಿಮ್ಮ ಪರಿಶ್ರಮ ಗಮನಿಸುತ್ತಿದ್ದೇವೆ, ಗೆಲುವು ನಿಮ್ಮದೇ, ಈ ಸಲ ಕಪ್ ನಮ್ದೇ ಎಂದು ಶಿವಕುಮಾರ್ ಟೀಮಿಗೆ ಸಾಮಾಜಿಕ ಜಾಲತಾಣವೊಂದರ ಮೂಲಕ ಹಾರೈಸಿದ್ದಾರೆ.
ಇದನ್ನೂ ಓದಿ: Virat Kohli Retirement: ಶಾಕಿಂಗ್: ಇಂದು ಆರ್ಸಿಬಿ ಟ್ರೋಫಿ ಗೆದ್ದರೆ ಐಪಿಎಲ್ಗೂ ವಿರಾಟ್ ಕೊಹ್ಲಿ ನಿವೃತ್ತಿ?
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ

ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್

ಪ್ರಿಯಾಂಕ್ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ

‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
