ತಮಿಳುನಾಡುಗೆ ಕಾವೇರಿ ನೀರು; ಲೀಗಲ್ ಟೀಮನ್ನು ಭೇಟಿಯಾಗಲು ನಾಳೆ ಡಿಕೆ ಶಿವಕುಮಾರ್ ದೆಹಲಿಗೆ ಪಯಣ

ತಮಿಳುನಾಡುಗೆ ಕಾವೇರಿ ನೀರು; ಲೀಗಲ್ ಟೀಮನ್ನು ಭೇಟಿಯಾಗಲು ನಾಳೆ ಡಿಕೆ ಶಿವಕುಮಾರ್ ದೆಹಲಿಗೆ ಪಯಣ
|

Updated on: Aug 30, 2023 | 12:27 PM

ರಾಜ್ಯದ ಜಲಾಶಯಗಳ ಬೀಗದ ಕೈಗಳು ತಮ್ಮ ಕೈಯಲ್ಲಿದೆ, ಅವು ಬೇರೆಯವರ ಕೈ ಸೇರದಂತೆ ರಾಜ್ಯ ಸರ್ಕಾರ ಎಚ್ಚರವಹಿಸಬೇಕಿದೆ ಎಂದು ಶಿವಕುಮಾರ್ ಹೇಳಿದರು. ಕಾವೇರಿ ನೀರಿಗೆ ಸಂಬಂಧಿಸಿದ ಗಂಭೀರ ಮತ್ತು ಸೂಕ್ಷ್ಮ ವಿಷಯದಲ್ಲೂ ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ರಾಜಕಾರಣ ಮಾಡುತ್ತಿದ್ದಾರೆ, ಯಾರು ಏನು ಬೇಕಾದರೂ ಟೀಕೆ ಮಾಡಲಿ, ರಾಜ್ಯ ರೈತರ ಹಿತ ಕಾಯುವುದು ತಮ್ಮ ಆದ್ಯತೆಯಾಗಿದೆ ಎಂದು ಶಿವಕುಮಾರ್ ಹೇಳಿದರು.

ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಮೈಸೂರಲ್ಲಿ ಇಂದು ನಡೆಯುತ್ತಿರುವ ಗೃಹ ಲಕ್ಷ್ಮಿ ಕಾರ್ಯಕ್ರಮದ (Gruha Lakshmi ) ಭಾಗವಾಗಲು ತೆರಳುವ ಮೊದಲು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿ ನಾಳೆ ದೆಹಲಿಗೆ ಹೋಗುತ್ತಿರುವ ವಿಷಯವನ್ನು ತಿಳಿಸಿದರು. ಹದಿನೈದು ದಿನಗಳವರೆಗೆ ತಮಿಳುನಾಡುಗೆ 5,000 ಟಿಎಂಸಿ ಕಾವೇರಿ ನದಿ ನೀರನ್ನು ಬಿಡುವಂತೆ ಸುಪ್ರೀಮ್ ಕೋರ್ಟ್ ಆದೇಶಿಸಿದೆ. ಶುಕ್ರವಾರ ನ್ಯಾಯಾಲಯದಲ್ಲಿ ಕರ್ನಾಟಕದ ಪರ ವಕೀಲರು ವಾದ ಮಂಡಿಸಲಿದ್ದು ಅವರನ್ನು ತಮ್ಮ ಟೀಮಿನೊಂದಿಗೆ ಭೇಟಿಯಾಗಬೇಕಿದೆ. ವಕೀಲರಿಗೆ ವಸ್ತುಸ್ಥಿತಿಯನ್ನು ವಿವರಿಸಬೇಕಿದೆ. ರಾಜ್ಯದ ಜಲಾಶಯಗಳ ಬೀಗದ ಕೈಗಳು ತಮ್ಮ ಕೈಯಲ್ಲಿದೆ, ಅವು ಬೇರೆಯವರ ಕೈ ಸೇರದಂತೆ ರಾಜ್ಯ ಸರ್ಕಾರ ಎಚ್ಚರವಹಿಸಬೇಕಿದೆ ಎಂದು ಶಿವಕುಮಾರ್ ಹೇಳಿದರು. ಕಾವೇರಿ ನೀರಿಗೆ ಸಂಬಂಧಿಸಿದ ಗಂಭೀರ ಮತ್ತು ಸೂಕ್ಷ್ಮ ವಿಷಯದಲ್ಲೂ ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ರಾಜಕಾರಣ ಮಾಡುತ್ತಿದ್ದಾರೆ, ಯಾರು ಏನು ಬೇಕಾದರೂ ಟೀಕೆ ಮಾಡಲಿ, ರಾಜ್ಯ ರೈತರ ಹಿತ ಕಾಯುವುದು ತಮ್ಮ ಆದ್ಯತೆಯಾಗಿದೆ ಎಂದು ಶಿವಕುಮಾರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow us
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?