ರೇಷನ್ ಕಾರ್ಡ್ ಇ-ಕೆವೈಸಿ ವೇಳೆ ತಾಂತ್ರಿಕ ಸಮಸ್ಯೆ ಬಗ್ಗೆ ಡಿಸಿಎಂ ಪರಮೇಶ್ವರ್ ಹೇಳಿದ್ದಿಷ್ಟು
ಡಿಸಿಎಂ ಪರಮೇಶ್ವರ್, ರೇಷನ್ ಕಾರ್ಡ್ ಇ-ಕೆವೈಸಿ ವೇಳೆ ತಾಂತ್ರಿಕ ಸಮಸ್ಯೆ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ಮಾಡುತ್ತೇವೆ. ಸದ್ಯ ಸರಣಿ ರಜೆ ಬಂದಿದೆ, ತಾಂತ್ರಿಕ ಸಮಸ್ಯೆ ಬಗ್ಗೆ ಚರ್ಚಿಸುತ್ತೇವೆ. ತಾಂತ್ರಿಕ ಸಮಸ್ಯೆ ಇದ್ದರೆ ದಿನಾಂಕ ವಿಸ್ತರಣೆ ಮಾಡೋ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು, ಸೆಪ್ಟೆಂಬರ್ 14): ರಾಜ್ಯದ ಜನಸಾಮಾನ್ಯರಿಗೆ ಈಗ ಮತ್ತೊಂದು ಹೊಸ ಆತಂಕ ಶುರುವಾಗಿದೆ. ಮುಂಜಾನೆ 5 ಗಂಟೆಯ ಚಳಿಯಲ್ಲೂ ಹಳ್ಳಿ-ನಗರ ಎನ್ನದೆ ನ್ಯಾಯಬೆಲೆ ಅಂಗಡಿಗಳ ಮುಂದೆ ವೃದ್ಧರು, ಮಹಿಳೆಯರು ಮತ್ತು ಪುಟ್ಟ ಮಕ್ಕಳ ಸಹಿತ ಜನ ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಲ್ಲುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆಹಾರ ಇಲಾಖೆಯು ಪಡಿತರ ಚೀಟಿ ಹೊಂದಿರುವ ಪ್ರತಿಯೊಬ್ಬ ಸದಸ್ಯರಿಗೂ ಇದೇ ಸೆಪ್ಟೆಂಬರ್ 30ರ ಒಳಗೆ ಇ-ಕೆವೈಸಿ ಮಾಡಿಸುವುದು ಕಡ್ಡಾಯ ಎಂದು ಡೆಡ್ಲೈನ್ ವಿಧಿಸಿದೆ. ಆದ್ರೆ, ಸರ್ವರ್ ಸಮಸ್ಯೆ ಇದೆ. ಹೀಗಾಗಿ ಜನರು ಆತಂಕಗೊಂಡಿದ್ದಾರೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಪರಮೇಶ್ವರ್, ರೇಷನ್ ಕಾರ್ಡ್ ಇ-ಕೆವೈಸಿ ವೇಳೆ ತಾಂತ್ರಿಕ ಸಮಸ್ಯೆ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ಮಾಡುತ್ತೇವೆ. ಸದ್ಯ ಸರಣಿ ರಜೆ ಬಂದಿದೆ, ತಾಂತ್ರಿಕ ಸಮಸ್ಯೆ ಬಗ್ಗೆ ಚರ್ಚಿಸುತ್ತೇವೆ. ತಾಂತ್ರಿಕ ಸಮಸ್ಯೆ ಇದ್ದರೆ ದಿನಾಂಕ ವಿಸ್ತರಣೆ ಮಾಡೋ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Sep 14, 2026 12:28 PM
ಗಣೇಶ ಚತುರ್ಥಿ ದಿನವೇ ಸಿದ್ದರಾಮಯ್ಯ ಗೃಹಪ್ರವೇಶ: ಭವ್ಯ ಬಂಗಲೆ ಹೇಗಿದೆ ನೋಡಿ
ಮೈಸೂರಿನ 101 ಗಣಪತಿ ದೇವಾಲಯದ ಬಗ್ಗೆ ನೀವು ತಿಳಿಯಲೇಬೇಕಾದ ಮಾಹಿತಿ ಇಲ್ಲಿದೆ
ಬಿಗ್ ಬಾಸ್: ಗಗನ್ ಚಿನ್ನಪ್ಪ ವಿರುದ್ಧ ತಿರುಗಿಬಿದ್ದ ಕಾಮನರ್ ಸ್ಪರ್ಧಿಗಳು
ಸರ್ಕಾರಕ್ಕೆ 100ರ ಸಂಭ್ರಮ :ಬಿಕೆ ಹರಿಪ್ರಸಾದ್ ಅಸಮಾಧಾನ

