ರೇಷನ್ ಕಾರ್ಡ್ ಇ-ಕೆವೈಸಿ ವೇಳೆ ತಾಂತ್ರಿಕ ಸಮಸ್ಯೆ ಬಗ್ಗೆ ಡಿಸಿಎಂ ಪರಮೇಶ್ವರ್ ಹೇಳಿದ್ದಿಷ್ಟು

Updated on: Sep 14, 2026 | 12:54 PM

ಡಿಸಿಎಂ ಪರಮೇಶ್ವರ್, ರೇಷನ್ ಕಾರ್ಡ್ ಇ-ಕೆವೈಸಿ ವೇಳೆ ತಾಂತ್ರಿಕ ಸಮಸ್ಯೆ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ಮಾಡುತ್ತೇವೆ.​ ಸದ್ಯ ಸರಣಿ ರಜೆ ಬಂದಿದೆ, ತಾಂತ್ರಿಕ ಸಮಸ್ಯೆ ಬಗ್ಗೆ ಚರ್ಚಿಸುತ್ತೇವೆ. ತಾಂತ್ರಿಕ ಸಮಸ್ಯೆ ಇದ್ದರೆ ದಿನಾಂಕ ವಿಸ್ತರಣೆ ಮಾಡೋ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು, ಸೆಪ್ಟೆಂಬರ್ 14): ರಾಜ್ಯದ ಜನಸಾಮಾನ್ಯರಿಗೆ ಈಗ ಮತ್ತೊಂದು ಹೊಸ ಆತಂಕ ಶುರುವಾಗಿದೆ. ಮುಂಜಾನೆ 5 ಗಂಟೆಯ ಚಳಿಯಲ್ಲೂ ಹಳ್ಳಿ-ನಗರ ಎನ್ನದೆ ನ್ಯಾಯಬೆಲೆ ಅಂಗಡಿಗಳ ಮುಂದೆ ವೃದ್ಧರು, ಮಹಿಳೆಯರು ಮತ್ತು ಪುಟ್ಟ ಮಕ್ಕಳ ಸಹಿತ ಜನ ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಲ್ಲುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆಹಾರ ಇಲಾಖೆಯು ಪಡಿತರ ಚೀಟಿ ಹೊಂದಿರುವ ಪ್ರತಿಯೊಬ್ಬ ಸದಸ್ಯರಿಗೂ ಇದೇ ಸೆಪ್ಟೆಂಬರ್ 30ರ ಒಳಗೆ ಇ-ಕೆವೈಸಿ ಮಾಡಿಸುವುದು ಕಡ್ಡಾಯ ಎಂದು ಡೆಡ್‌ಲೈನ್ ವಿಧಿಸಿದೆ. ಆದ್ರೆ, ಸರ್ವರ್ ಸಮಸ್ಯೆ ಇದೆ. ಹೀಗಾಗಿ ಜನರು ಆತಂಕಗೊಂಡಿದ್ದಾರೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಪರಮೇಶ್ವರ್, ರೇಷನ್ ಕಾರ್ಡ್ ಇ-ಕೆವೈಸಿ ವೇಳೆ ತಾಂತ್ರಿಕ ಸಮಸ್ಯೆ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ಮಾಡುತ್ತೇವೆ.​ ಸದ್ಯ ಸರಣಿ ರಜೆ ಬಂದಿದೆ, ತಾಂತ್ರಿಕ ಸಮಸ್ಯೆ ಬಗ್ಗೆ ಚರ್ಚಿಸುತ್ತೇವೆ. ತಾಂತ್ರಿಕ ಸಮಸ್ಯೆ ಇದ್ದರೆ ದಿನಾಂಕ ವಿಸ್ತರಣೆ ಮಾಡೋ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Sep 14, 2026 12:28 PM
Loading...
Unable to load recommendations.
Follow Us