AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯಗೆ ಹೈಕಮಾಂಡ್ ಬುಲಾವ್ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಏನಂದ್ರು?

ಸಿದ್ದರಾಮಯ್ಯಗೆ ಹೈಕಮಾಂಡ್ ಬುಲಾವ್ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಏನಂದ್ರು?

ಪ್ರಸನ್ನ ಹೆಗಡೆ
|

Updated on: May 25, 2026 | 9:43 AM

Share

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಬುಲಾವ್ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಸಿಎಂ ಅವರನ್ನು ಯಾಕೆ ಕರೆದಿದ್ದಾರೆ, ಏನು ಮಾತನಾಡಿದ್ದಾರೆ ಎಂದು ನನಗೆ ತಿಳಿದಿಲ್ಲ ಎಂದಿದ್ದಾರೆ. ತಮಗೆ ಕರೆ ಬಂದಿಲ್ಲ ಎಂದ ಡಿಕೆಶಿ, ಮುಖ್ಯಮಂತ್ರಿ ಮತ್ತು ಸುರ್ಜೇವಾಲ ಜೊತೆ ಸಭೆ ನಿಗದಿಯಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು, ಮೇ 25: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಬುಲಾವ್ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಸಿಎಂ ಅವರನ್ನು ಯಾಕೆ ಕರೆದಿದ್ದಾರೆ ಎಂಬುದು ತಮಗೆ ತಿಳಿದಿಲ್ಲ ಎಂದು ಡಿಕೆಶಿ ಹೇಳಿದ್ದಾರೆ. ಸಿಎಂ ನನಗೆ ಏನೂ ಹೇಳಿಲ್ಲ ಎಂದಿರುವ ಅವರು, ಹೈಕಮಾಂಡ್‌ನಿಂದ ತಮಗೆ ಕರೆ ಬಂದಿಲ್ಲ. ಕರೆದರೆ ಹೋಗುವುದಾಗಿ ತಿಳಿಸಿದ್ದಾರೆ. ಸಂಪುಟ ಪುನರಚನೆ ಅಥವಾ ನಾಯಕತ್ವ ಬದಲಾವಣೆ ಕುರಿತ ಪ್ರಶ್ನೆಗಳಿಗೆ, ನನಗೆ ಗೊತ್ತಿಲ್ಲ ಎಂದು ಅವರು ಉತ್ತರಿಸಿದ್ದಾರೆ. ಸದ್ಯಕ್ಕೆ ಹೈಕಮಾಂಡ್‌ನಿಂದ ಇನ್ನಾವುದೇ ಮಾಹಿತಿ ಬಂದಿಲ್ಲ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Prasanna Hegde
Prasanna Hegde

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More