ಕುಮಾರಸ್ವಾಮಿ ಟ್ವೀಟ್​ಗೆ ಉತ್ತರಿಸಲಾಗದೆ ವಿತಂಡವಾದಕ್ಕಿಳಿದ ಡಿಸಿಎಂ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ

Updated on: Oct 16, 2024 | 11:22 AM

ಎಷ್ಟೇ ಮಳೆಯಾದರೂ, ಎಂಥದ್ದೇ ಸ್ಥಿತಿ ಎದುರಾದರೂ ಎದುರಿಸಲು ಸರ್ಕಾರ ಮತ್ತು ಜನ ತಯಾರಿದ್ದಾರೆ ಶಿವಕುಮಾರ್ ಹೇಳುತ್ತಾರೆ. ಪರಿಸ್ಥಿತಿ ಕೈ ಮೀರಿದ ಮೇಲೆ ಎದುರಿಸಲು ಜನರ ಬೈಗುಳ ಬಿಟ್ಟರೆ ಮತ್ತೇನೂ ಇರಲ್ಲ. ಮಳೆಯಿಂದ ಉಂಟಾಗಬಹುದಾದ ಅನಾಹುತ ಎದುರಿಸಲು ಸರ್ಕಾರ ಬೇಸಿಗೆಯಲ್ಲೇ ತಯಾರಿ ಮಾಡಿಕೊಳ್ಳಬೇಕಿತ್ತು.

ಬೆಂಗಳೂರು: ವಿತಂಡ ವಾದ ಅಂದರೆ ಇದೇ ಇರಬೇಕು. ನಿನ್ನೆ ನಗರದಲ್ಲಿ ಸುರಿದ ಮಳೆಗೆ ಜನ ಅನುಭವಿಸಿದ ಪಾಡು ಕಂಡು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ತಮ್ಮ ಎಕ್ಸ್ ಹ್ಯಾಂಡಲ್ ನಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬೆಂಗಳೂರು ಉಸ್ತವಾರಿ ಸಚಿವ ಡಿಕೆ ಶಿವಕುಮಾರ್ ಟ್ವೀಟ್ ಗೆ ಸಮಾಧಾನವಾಗಿ ಉತ್ತರ ಕೊಡುವ ಬದಲು, ನಾವು ಪ್ರಕೃತಿಗೆ ಬುದ್ಧಿ ಹೇಳಲಾಗುತ್ತಾ? ರಾಜ್ಯದ ಮತ್ತು ಬೆಂಗಳೂರಿನ ಮಾನವನ್ನು ಹರಾಜು ಹಾಕುವ ಕೆಲಸವನ್ನು ಕೇಂದ್ರ ಸಚಿವ ಮಾಡಿದ್ದಾರೆ ಎನ್ನುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಬೆಂಗಳೂರು ಮಳೆ: ಮಾನ್ಯತಾ ಟೆಕ್ ಪಾರ್ಕ್ ಮುಖ್ಯ ರಸ್ತೆ ಜಲಾವೃತಗೊಳ್ಳಲು ಕಾರಣ ಇದುವೇ ನೋಡಿ!

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.