ಅವರೇ ಮೇಳದಲ್ಲಿ ಮಹಿಳೆಯೊಬ್ಬರು ಡಿಕೆಶಿಗೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ

Updated on: Dec 27, 2025 | 4:57 PM

ಸಿಎಂ ಕುರ್ಚಿಗಾಗಿ ಡಿಕೆ ಶಿವಕುಮಾರ್ (DK Shivakumar) ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಇನ್ನೂ ಸ್ವಲ್ಪ ದಿನದಲ್ಲಿ ಡಿಕೆಶಿ ಸಿಎಂ ಆಗುವುದು ಗ್ಯಾರಂಟಿ ಎಂದು ಅವರ ಅಭಿಮಾನಿಗಳು ವಿಶ್ವಾದ ಮಾತುಗಳನ್ನಾಡುತ್ತಿದ್ದಾರೆ. ಮತ್ತೊಂದೆಡೆ ಸಿದ್ದರಾಮಯ್ಯನವರೇ ಐದು ವರ್ಷ ಪೂರ್ಣಗೊಳಿಸಲಿದ್ದಾರೆ ಎನ್ನುತ್ತಿದ್ದಾರೆ. ಇದರ ನಡುವೆ ಮಹಿಳೆಯೊಬ್ಬರು, ಡಿಸಿಎಂ ಸರ್‌ ಯಾವಾಗ ಸಿಎಂ ಆಗ್ತೀರಾ ಎಂದು ಡಿಕೆಶಿಗೆ ಪ್ರಶ್ನಿಸಿದ್ದಾರೆ. ಬೆಂಗಳೂರಿನ ಬಸವನಗುಡಿಯ ಅವರೇಬೇಳೆ ಮೇಳದಲ್ಲಿ ಈ ಪ್ರಸಂಗ ನಡೆದಿದೆ.

ಬೆಂಗಳೂರು, (ಡಿಸೆಂಬರ್ 27): ಸಿಎಂ ಕುರ್ಚಿಗಾಗಿ ಡಿಕೆ ಶಿವಕುಮಾರ್ (DK Shivakumar) ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಇನ್ನೂ ಸ್ವಲ್ಪ ದಿನದಲ್ಲಿ ಡಿಕೆಶಿ ಸಿಎಂ ಆಗುವುದು ಗ್ಯಾರಂಟಿ ಎಂದು ಅವರ ಅಭಿಮಾನಿಗಳು ವಿಶ್ವಾದ ಮಾತುಗಳನ್ನಾಡುತ್ತಿದ್ದಾರೆ. ಮತ್ತೊಂದೆಡೆ ಸಿದ್ದರಾಮಯ್ಯನವರೇ ಐದು ವರ್ಷ ಪೂರ್ಣಗೊಳಿಸಲಿದ್ದಾರೆ ಎನ್ನುತ್ತಿದ್ದಾರೆ. ಇದರ ನಡುವೆ ಮಹಿಳೆಯೊಬ್ಬರು, ಡಿಸಿಎಂ ಸರ್‌ ಯಾವಾಗ ಸಿಎಂ ಆಗ್ತೀರಾ ಎಂದು ಡಿಕೆಶಿಗೆ ಪ್ರಶ್ನಿಸಿದ್ದಾರೆ. ಬೆಂಗಳೂರಿನ ಬಸವನಗುಡಿಯ ಅವರೇಬೇಳೆ ಮೇಳದಲ್ಲಿ ಈ ಪ್ರಸಂಗ ನಡೆದಿದೆ.

ಹೌದು…ಬೆಂಗಳೂರಿನ ಬಸವನಗುಡಿಯ ಅವರೇಬೇಳೆ ಮೇಳದಲ್ಲಿ ಡಿಕೆ ಶಿವಕುಮಾರ್ ಭಾಷಣ ಮುಗಿಸಿ ಹೊರಟ್ಟಿದ್ದರು. ಈ ವೇಳೆ ಮಹಿಳೆಯೊಬ್ಬರು ಡಿಸಿಎಂ ಸರ್ ನೀವು ಸಿಎಂ ಆಗುವುದು ಯಾವಾಗ ಎಂದು ಡಿಕೆಶಿಗೆ ಕೇಳಿದ್ದಾರೆ. ಇದನ್ನು ಕೇಳಿಸಿಕೊಂಡು ಡಿಕೆ ಶಿವಕುಮಾರ್, ಏನೂ ಉತ್ತರಿಸದೆ ತೆರಳಿದರು.

Published on: Dec 27, 2025 04:47 PM
Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More