ದೆಹಲಿಯಲ್ಲಿ ಭೀಕರ ಅಪಘಾತ, ಹಣಕಾಸು ಸಚಿವಾಲಯದ ಅಧಿಕಾರಿ ಸಾವು, ಪತ್ನಿ ಸ್ಥಿತಿ ಗಂಭೀರ

Updated on: Sep 15, 2025 | 7:42 AM

ಹಣಕಾಸು ಸಚಿವಾಲಯದ ಅಧಿಕಾರಿ ಹೋಗುತ್ತಿದ್ದ ಬೈಕ್​​ಗೆ ಬಿಎಂಡಬ್ಲ್ಯೂ ಕಾರು ಡಿಕ್ಕಿ ಹೊಡೆದ ಪರಿಣಾಮ, ಹಣಕಾಸು ಸಚಿವಾಲಯದ ಅಡಿಯಲ್ಲಿ ಆರ್ಥಿಕ ವ್ಯವಹಾರಗಳ ಇಲಾಖೆಯಲ್ಲಿ ಉಪ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ ನವಜೋತ್ ಸಿಂಗ್ ಸಾವನ್ನಪ್ಪಿದ್ದಾರೆ. ಅವರು ಮತ್ತು ಅವರ ಪತ್ನಿ ಬಾಂಗ್ಲಾ ಸಾಹಿಬ್ ಗುರುದ್ವಾರದಿಂದ ಮನೆಗೆ ಹಿಂತಿರುಗುತ್ತಿದ್ದಾಗ ರಿಂಗ್ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಮಹಿಳೆಯೊಬ್ಬರು ಕಾರು ಚಲಾಯಿಸುತ್ತಿದ್ದರು ಎಂದು ತಿಳಿದುಬಂದಿದೆ. ಬಳಿಕ ಟ್ಯಾಕ್ಸಿ ಮೂಲಕ ದಂಪತಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ನವಜೋತ್ ಸಿಂಗ್ ಅವರನ್ನು ಜಿಟಿಬಿ ನಗರದ ನ್ಯೂಲೈಫ್ ಆಸ್ಪತ್ರೆಗೆ ಸಾಗಿಸಲಾಯಿತು, ಆದರೆ ವೈದ್ಯರು ಅವರನ್ನು ಮೃತಪಟ್ಟಿರುವುದಾಗಿ ಘೋಷಿಸಿದರು

ನವದೆಹಲಿ, ಸೆಪ್ಟೆಂಬರ್ 15: ಹಣಕಾಸು ಸಚಿವಾಲಯದ ಅಧಿಕಾರಿ ಹೋಗುತ್ತಿದ್ದ ಬೈಕ್​​ಗೆ ಬಿಎಂಡಬ್ಲ್ಯೂ ಕಾರು ಡಿಕ್ಕಿ ಹೊಡೆದ ಪರಿಣಾಮ, ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಇಲಾಖೆಯಲ್ಲಿ ಉಪ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ ನವಜೋತ್ ಸಿಂಗ್ ಸಾವನ್ನಪ್ಪಿದ್ದಾರೆ. ಅವರು ಮತ್ತು ಅವರ ಪತ್ನಿ ಬಾಂಗ್ಲಾ ಸಾಹಿಬ್ ಗುರುದ್ವಾರದಿಂದ ಮನೆಗೆ ಹಿಂತಿರುಗುತ್ತಿದ್ದಾಗ ರಿಂಗ್ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ.

ಮಹಿಳೆಯೊಬ್ಬರು ಕಾರು ಚಲಾಯಿಸುತ್ತಿದ್ದರು ಎಂದು ತಿಳಿದುಬಂದಿದೆ. ಬಳಿಕ ಟ್ಯಾಕ್ಸಿ ಮೂಲಕ ದಂಪತಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ನವಜೋತ್ ಸಿಂಗ್ ಅವರನ್ನು ಜಿಟಿಬಿ ನಗರದ ನ್ಯೂಲೈಫ್ ಆಸ್ಪತ್ರೆಗೆ ಸಾಗಿಸಲಾಯಿತು, ಆದರೆ ವೈದ್ಯರು ಅವರನ್ನು ಮೃತಪಟ್ಟಿರುವುದಾಗಿ ಘೋಷಿಸಿದರು. ಅವರ ಪತ್ನಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಅಪಘಾತ ಹೇಗಾಯಿತು ಎಂಬುದರ ಕುರಿತು ಸ್ಪಷ್ಟ ಮಾಹಿತಿ ಇನ್ನೂ ತಿಳಿದುಬಂದಿಲ್ಲ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Published on: Sep 15, 2025 07:41 AM
Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More