AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ: ಕೆರೆಯಲ್ಲಿ ನೂರಾರು ಮೀನುಗಳ ಮಾರಣಹೋಮ; ಆಮ್ಲಜನಕ ಕೊರತೆಯ ಶಂಕೆ

ಮಂಡ್ಯ: ಕೆರೆಯಲ್ಲಿ ನೂರಾರು ಮೀನುಗಳ ಮಾರಣಹೋಮ; ಆಮ್ಲಜನಕ ಕೊರತೆಯ ಶಂಕೆ

ಪ್ರಶಾಂತ್​ ಬಿ.
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jan 05, 2024 | 2:51 PM

Share

ಮಂಡ್ಯ(Mandya) ತಾಲ್ಲೂಕಿನ ರಾಗಿಮುದ್ದನಹಳ್ಳಿ ಗ್ರಾಮದ ಕೆರೆಯಲ್ಲಿ ನೂರಾರು ಮೀನುಗಳು ಸಾವನ್ನಪ್ಪಿದ ಘಟನೆ ನಡೆದಿದೆ. ಆಮ್ಲಜನಕದ ಕೊರತೆಯಿಂದ ಮೀನುಗಳು ಮೃತವಾಗಿರುವ ಶಂಕೆ ವ್ಯಕ್ತವಾಗಿದ್ದು, ಸಂಪೂರ್ಣ ಮಾಹಿತಿ ಸಿಗುವವರೆಗೆ ಕೆರೆಯಲ್ಲಿ ಮೀನು ಹಿಡಿಯದಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಮಂಡ್ಯ, ಜ.05: ಕೆರೆಯಲ್ಲಿ ನೂರಾರು ಮೀನುಗಳು ಸಾವನ್ನಪ್ಪಿದ ಘಟನೆ ಮಂಡ್ಯ(Mandya) ತಾಲ್ಲೂಕಿನ ರಾಗಿಮುದ್ದನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೆರೆಯಲ್ಲಿ ಆಮ್ಲಜನಕದ ಕೊರತೆಯಿಂದ ಮೀನುಗಳು ಮೃತವಾಗಿರುವ ಶಂಕೆ ವ್ಯಕ್ತವಾಗಿದೆ. ಮೀನು(Fish)ಗಳು ಕೆರೆಯಲ್ಲಿ ತೇಲುತ್ತಿದ್ದು, ಇದನ್ನು ಗಮನಿಸಿದ ಸ್ಥಳೀಯರು ಅಧಿಕಾರಿಗಳಿಗೆ ಮಾಹಿತಿ ಕೊಟ್ಟಿದ್ದಾರೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೇಲ್ನೋಟಕ್ಕೆ ಆಮ್ಲಜನಕ ಕೊರತೆಯಿಂದ ಮೀನುಗಳ ಮರಣವಾಗಿರುವ ಬಗ್ಗೆ ಶಂಕೆ ಮೂಡಿದ್ದು, ಸಂಪೂರ್ಣ ಮಾಹಿತಿ ಸಿಗುವವರೆಗೆ ಕೆರೆಯಲ್ಲಿ ಮೀನು ಹಿಡಿಯದಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More