ದೀಪಾವಳಿ ಹಬ್ಬದ ರಜೆ:ಊರಿನತ್ತ ಮುಖ ಮಾಡಿದ ಜನ, ಮೆಜೆಸ್ಟಿಕ್‌ನಲ್ಲಿ ಜನಸಾಗರ

Updated on: Oct 17, 2025 | 10:09 PM

ದೀಪಾವಳಿ ಹಬ್ಬ ಇರುವುದು ಸೋಮವಾರ. ಆದ್ರೆ, ಶನಿವಾರ ಹಾಗೂ ಭಾನುವಾರ ವೀಕೆಂಡ್ ರಜೆ ಬಂದಿರುವುದರಿಂದ ಜನರು ಬೆಂಗಳೂರಿನಿಂದ ತಮ್ಮ ತಮ್ಮ ಊರುಗಳತ್ತ ಮುಖ ಮಾಡಿದ್ದಾರೆ. ಸಾಲು ಸಾಲು ರಜೆ ಹಿನ್ನೆಲ್ಲೆಯಲ್ಲಿ ಬೆಂಗಳೂರಿನ ಉದ್ಯೋಗ ಹಾಗೂ ವಿದ್ಯಾಭ್ಯಾಸ ಮಾಡುತ್ತಿರುವವರು ದೀಪಾವಳಿ ಹಬ್ಬ ಆಚರಿಸಲು ಊರಿಗೆ ತೆರಳುತ್ತಿದ್ದಾರೆ. ಇದರಿಂದ ಮೆಜೆಸ್ಟಿಕ್ ಸುತ್ತಮುತ್ತ ಫುಲ್ ಟ್ರಾಫಿಕ್ ಜಾಮ್ ಆಗಿದೆ. ಇನ್ನು ಊರಿಗೆ ತೆರಳು ಬಸ್ ಕೊರತೆ ಎದುರಾಗಿದ್ದರಿಂದ ಜನರು ಪರದಾಡುತ್ತಿದ್ದಾರೆ. ಸಿಕ್ಕ ಸಿಕ್ಕ ಬಸ್ ಹತ್ತಿಕೊಂಡು ಹೋಗುತ್ತಿದ್ದು,ಕೆಎಸ್​​ಆರ್ ಟಿ ಬಸ್ ಟರ್ಮಿನಲ್ ಜನರಿಂದ ತುಂಬಿ ತುಳುಕುತ್ತಿದೆ.

ಬೆಂಗಳೂರು, (ಅಕ್ಟೋಬರ್ 17): ದೀಪಾವಳಿ ಹಬ್ಬ ಇರುವುದು ಸೋಮವಾರ. ಆದ್ರೆ, ಶನಿವಾರ ಹಾಗೂ ಭಾನುವಾರ ವೀಕೆಂಡ್ ರಜೆ ಬಂದಿರುವುದರಿಂದ ಜನರು ಬೆಂಗಳೂರಿನಿಂದ ತಮ್ಮ ತಮ್ಮ ಊರುಗಳತ್ತ ಮುಖ ಮಾಡಿದ್ದಾರೆ. ಸಾಲು ಸಾಲು ರಜೆ ಹಿನ್ನೆಲ್ಲೆಯಲ್ಲಿ ಬೆಂಗಳೂರಿನ ಉದ್ಯೋಗ ಹಾಗೂ ವಿದ್ಯಾಭ್ಯಾಸ ಮಾಡುತ್ತಿರುವವರು ದೀಪಾವಳಿ ಹಬ್ಬ ಆಚರಿಸಲು ಊರಿಗೆ ತೆರಳುತ್ತಿದ್ದಾರೆ. ಇದರಿಂದ ಮೆಜೆಸ್ಟಿಕ್ ಸುತ್ತಮುತ್ತ ಫುಲ್ ಟ್ರಾಫಿಕ್ ಜಾಮ್ ಆಗಿದೆ. ಇನ್ನು ಊರಿಗೆ ತೆರಳು ಬಸ್ ಕೊರತೆ ಎದುರಾಗಿದ್ದರಿಂದ ಜನರು ಪರದಾಡುತ್ತಿದ್ದಾರೆ. ಸಿಕ್ಕ ಸಿಕ್ಕ ಬಸ್ ಹತ್ತಿಕೊಂಡು ಹೋಗುತ್ತಿದ್ದು,ಕೆಎಸ್​​ಆರ್ ಟಿ ಬಸ್ ಟರ್ಮಿನಲ್ ಜನರಿಂದ ತುಂಬಿ ತುಳುಕುತ್ತಿದೆ.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More