Karnataka Assembly Polls: ಕಾಂಗ್ರೆಸ್ ಪಕ್ಷದಿಂದ ಅಮಾನತುಗೊಂಡಿರುವ ಕೆಜಿಎಫ್ ಬಾಬು, ಹೆಚ್ ಡಿ ಕುಮಾರಸ್ವಾಮಿಯನ್ನು ಭೇಟಿಯಾಗಿದ್ದು ಯಾಕೆ?

ಅರುಣ್​ ಕುಮಾರ್​ ಬೆಳ್ಳಿ

Updated on: Apr 08, 2023 | 7:18 PM

ಬೇರೆ ರಾಜ್ಯಗಳಿಂದ ಹೈರ್ ಮಾಡಿರುವ ಅಂಗರಕ್ಷಕರ ಭದ್ರತೆಯಲ್ಲಿ ತಿರಗಾಡುತ್ತಿರುವ ಬಾಬು ಹೆಸರು ಕೊನೆ ಘಳಿಗೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಸೇರಿದರೆ ಆಶ್ಚರ್ಯವಿಲ್ಲ.

ಬೆಂಗಳೂರು: ಇದೊಂದು ಅನಿರೀಕ್ಷಿತ ಬೆಳವಣಿಗೆ. ಕಾಂಗ್ರೆಸ್ ಪಕ್ಷದಿಂದ ಗೊಂಡಿರುವ ಕೆಜಿಎಫ್ ಬಾಬು (KGF Babu) ಇಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಅವರನ್ನು ಭೇಟಿಯಾದರು. ಭೇಟಿ ನಡೆದಿದ್ದು ಯಶವಂತಪುರದ ಜೆಡಿಎಸ್ ಕಾರ್ಯಕರ್ತರೊಬ್ಬರ ಮನೆಯಲ್ಲಿ. ಬಾಬು, ಕುಮಾರಸ್ವಾಮಿಯವ ಕಾಲು ಮುಟ್ಟಿ ನಮಸ್ಕರಿಸಿದ್ದು ಮತ್ತು ಜೆಡಿಎಸ್ ನಾಯಕ ಅವರ ಬೆನ್ನ ಮೇಲೆ ಕೈಯಿಟ್ಟು ಆಶೀರ್ವದಿಸಿದ್ದು ಏನನ್ನೋ ಸೂಚಿಸುತ್ತದೆ ಮಾರಾಯ್ರೇ. ಕುಮಾರಸ್ವಾಮಿ ಅಭ್ಯರ್ಥಿಗಳ ಎರಡನೇ ಪಟ್ಟಿ (second list) ಇನ್ನೂ ಬಿಡುಗಡೆಯಾಗಿಲ್ಲ, ಬೇರೆ ರಾಜ್ಯಗಳಿಂದ ಹೈರ್ ಮಾಡಿರುವ ಅಂಗರಕ್ಷಕರ ಭದ್ರತೆಯಲ್ಲಿ ತಿರಗಾಡುತ್ತಿರುವ ಬಾಬು ಹೆಸರು ಕೊನೆ ಘಳಿಗೆಯಲ್ಲಿ ಅಭ್ಯರ್ಥಿಗಳ ಪಟ್ಟಿ ಸೇರಿದರೆ ಆಶ್ಚರ್ಯವಿಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.