Reservoir dries up: ತುಂಗಭದ್ರಾ ಜಲಾಶಯದಲ್ಲಿ ನೀರು ತಳ ಕಂಡಿದೆ, ಬಳಕೆಗೆ ಕೇವಲ 2 ಟಿಎಮ್​ಸಿ ಮಾತ್ರ ಲಭ್ಯ

ಅರುಣ್​ ಕುಮಾರ್​ ಬೆಳ್ಳಿ

Updated on: Jun 19, 2023 | 11:49 AM

ಈ ವರ್ಷ ಮಾನ್ಸೂನ್ ವಿಳಂಬಗೊಂಡಿರುವುದರಿಂದ ನದಿ ಮತ್ತು ಜಲಾಶಯದಲ್ಲಿ ನೀರಿಲ್ಲ.

ಬಳ್ಳಾರಿ: ಬೇಸಾಯಕ್ಕೆ ಮಳೆಯನ್ನು ನಂಬಿಕೊಳ್ಳುವ ರೈತರ ಬದುಕು ನಿರಂತರ ಅತಂತ್ರ, ಹೀಗೆ ಹೇಳಲು ಕಾರಣವಿಲ್ಲದಿಲ್ಲ. ಈ ಬಾರಿ ರಾಜ್ಯದಲ್ಲಿ ಮಾನ್ಸೂನ್ (monsoon) ವಿಳಂಬಗೊಂಡಿದೆ. ವಿಡಿಯೋದಲ್ಲಿ ಕಾಣುತ್ತಿರುವ ತುಂಗಭಧ್ರಾ ಜಲಾಶಯವನ್ನು (Tungabhadra) ನೋಡಿ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬಹುದು. ಕಳೆದ ವರ್ಷ ಈ ದಿನದಂದು ಜಲಾಶಯದಲ್ಲಿ ನೀರಿನ ಮಟ್ಟ 41 ಟಿಎಮ್ ಸಿ ಇತ್ತು, ಈ ವರ್ಷ ಅದು ತಳಮಟ್ಟ ತಲುಪಿ ಕೇವಲ 4.5 ಟಿಎಮ್ ಸಿ ನೀರು ಮಾತ್ರ ಉಳಿದಿದೆ. ಅದರಲ್ಲಿ 2.5 ಟಿಎಮ್ ಸಿ ನೀರನ್ನು ಡೆಡ್ ಸ್ಟೋರೇಜ್ (dead storage) ಅಂತ ಪರಿಗಣಿಲಾಗುತ್ತದೆ. ಅಂದರೆ, ಅಷ್ಟು ನೀರನ್ನು ಜಲಾಶಯದಲ್ಲಿ ಕಾಯ್ದುಕೊಳ್ಳಲೇಬೇಕು. ಉಳಿದ 2 ಟಿಎಮ್ ಸಿ ನೀರನ್ನು ಕುಡಿಯುವುದಕ್ಕೆ ಉಪಯೋಗಿಸಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ. ತುಂಗಭಧ್ರಾ ನದಿ ಆಂಧ್ರ ಪ್ರದೇಶ ಸೇರಿದಂತೆ ಬಳ್ಳಾರಿ, ರಾಯಚೂರು, ಕೊಪ್ಪಳ ಜಿಲ್ಲೆಗಳ ಜನರ ಜೀವನಾಡಿ. ಆದರೆ ಈ ವರ್ಷ ಮಾನ್ಸೂನ್ ವಿಳಂಬಗೊಂಡಿರುವುದರಿಂದ ನದಿ ಮತ್ತು ಜಲಾಶಯದಲ್ಲಿ ನೀರಿಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.