ದೆಹಲಿಯಲ್ಲಿ ಗಾಳಿ ಗುಣಮಟ್ಟ ಕಳಪೆ: ಜಾಗೃತಿ ಮೂಡಿಸಲು ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ

Updated on: Dec 15, 2025 | 5:40 PM

ದೆಹಲಿಯಲ್ಲಿ ವಾಯು ಮಾಲಿನ್ಯದ ಬಗ್ಗೆ ಜಾಗೃತಿ ಮೂಡಿಸಲು ಟಿಡಿಪಿ ಸಂಸದ ಅಪ್ಪಲನಾಯ್ಡು ಕಲ್ಲಿಸೆಟ್ಟಿ ಮಾಸ್ಕ್ ಧರಿಸಿ ಸಂಸತ್ತಿಗೆ ಸೈಕಲ್‌ನಲ್ಲಿ ಆಗಮಿಸಿದರು. ಕಳಪೆ ಗಾಳಿಯ ಗುಣಮಟ್ಟದಿಂದ ಆರೋಗ್ಯದ ಪರಿಣಾಮಗಳನ್ನು ಎದುರಿಸಲು ವಾಹನಗಳ ಬದಲಿಗೆ ಸೈಕಲ್‌ಗಳನ್ನು ಬಳಸುವಂತೆ ಮನವಿ ಮಾಡಿದರು. ದೆಹಲಿಯ ಹದಗೆಟ್ಟ ಗಾಳಿಯ ಗುಣಮಟ್ಟದಿಂದ ಸಾರ್ವಜನಿಕರು ಅನಾರೋಗ್ಯಕ್ಕೆ ಒಳಗಾಗುತ್ತಿದ್ದು, ಜನರನ್ನು ಹಾಗೂ ರಾಜಕಾರಣಿಗಳನ್ನು ಎಚ್ಚರಿಸಲು ಅವರು ಈ ಕ್ರಮ ಕೈಗೊಂಡರು.

ದೆಹಲಿ,ಡಿ.15: ದೆಹಲಿಯಲ್ಲಿ ವಾಯು ಮಾಲಿನ್ಯದ ಬಗ್ಗೆ ಜಾಗೃತಿ ಮೂಡಿಸಲು ಟಿಡಿಪಿ ಸಂಸದ ಅಪ್ಪಲನಾಯ್ಡು ಕಲ್ಲಿಸೆಟ್ಟಿ , ಮಾಸ್ಕ್​​​​​ ಧರಿಸಿಕೊಂಡು ಸಂಸತ್ತಿಗೆ ಸೈಕಲ್​ನಲ್ಲಿ ಬಂದಿದ್ದಾರೆ. ದೆಹಲಿಯಲ್ಲಿ ಕಳಪೆ ಗಾಳಿಯ ಗುಣಮಟ್ಟದಿಂದ ಆರೋಗ್ಯದ ಪರಿಣಾಮವನ್ನು ಎದುರಿಸುವ ಕಾರಣ, ವಾಹನಗಳ ಬದಲು ಸೈಕಲ್​​​ಗಳನ್ನು ಬಳಸಿ ಎಂದು ಮನವಿ ಮಾಡಿದ್ದಾರೆ. ದೆಹಲಿಯಲ್ಲಿ ದಿನದಿಂದ ದಿನಕ್ಕೆ ಗಾಳಿಯ ಗುಣಮಟ್ಟ ಹದಗೆಟ್ಟಿದೆ. ಇದರಿಂದ ಸಾರ್ವಜನಿಕರು ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ಹೇಳಿದರು. ಈ ಮೂಲಕ ಜನರನ್ನು ಹಾಗೂ ನಮ್ಮ ಸಂಸದರು, ರಾಜಕಾರಣಿಗಳನ್ನು ಎಚ್ಚರಿಸಬೇಕಿದೆ. ವಾಹನ ಬಳಸುವ ಬದಲು ಸಂಸತ್ತಿಗೆ ಸೈಕಲ್​ನಲ್ಲಿ ಬನ್ನಿ, ಹಾಗೂ ವಾತಾವರಣದ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ಎಂದು ಹೇಳಿದ್ದಾರೆ. ಇನ್ನು ಬೆಂಗಳೂರಿನಲ್ಲೂ ಕೂಡ ಒಂದು ವಾರದಿಂದ ಗಾಳಿಯ ಗುಣಮಟ್ಟದಲ್ಲಿ ವ್ಯಾತ್ಯಾಸ ಕಂಡು ಬಂದಿದೆ. ಶನಿವಾರದಂದು ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ 206ಕ್ಕೆ ಇಳಿಕೆದಿತ್ತು. ಇಂದು ಬೆಳಿಗ್ಗೆ ಗಾಳಿಯ ಗುಣಮಟ್ಟ 165 ಇತ್ತು. ಇದೀಗ 105ಕ್ಕೆ ಬಂದಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More