ದೆಹಲಿ ಸ್ಫೋಟ: ಕಳೆದ ತಿಂಗಳು ನಾನೂ ಅದೇ ಸ್ಥಳದಲ್ಲಿದ್ದೆ ಎಂದ ಸಂಸದೆ

Updated By: ಗಂಗಾಧರ​ ಬ. ಸಾಬೋಜಿ

Updated on: Nov 12, 2025 | 5:33 PM

ದೆಹಲಿ ರೆಡ್ ಫೋರ್ಟ್ ಬಳಿಯ ಕಾರ್ ಬ್ಲಾಸ್ಟ್ ಸ್ಥಳದಲ್ಲಿ ಒಂದು ತಿಂಗಳ ಹಿಂದೆಯಷ್ಟೇ ಇದ್ದೆ ಎಂದು ಸಂಸದೆ ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದ್ದಾರೆ. ಇದು ಗುಪ್ತಚರ ಹಾಗೂ ವ್ಯವಸ್ಥೆಯ ವೈಫಲ್ಯ ಎಂದಿರುವ ಅವರು, 13 ಜೀವಗಳು ಬಲಿಯಾದ ಈ ಘಟನೆ ಬಗ್ಗೆ ಗೃಹ ಮತ್ತು ರಕ್ಷಣಾ ಸಚಿವಾಲಯಗಳು ಹೆಚ್ಚೆಚ್ಚು ಗಮನ ಹರಿಸಬೇಕು ಎಂದು ಒತ್ತಾಯಿಸಿದ್ದಾರೆ.

ದಾವಣಗೆರೆ, ನವೆಂಬರ್​ 12: ದೆಹಲಿ ಸ್ಫೋಟ ಪ್ರಕರಣದ ತನಿಖೆ ಚುರುಕುಗೊಂಡಿದೆ. ಎಲ್ಲ ಆಯಾಮಗಳಲ್ಲಿಯೂ ತನಿಖೆ ನಡೆಯುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದೆ ಪ್ರಭಾ ಮಲ್ಲಿಕಾರ್ಜುನ್​ ಪ್ರತಿಕ್ರಿಯಿಸಿದ್ದು, ಒಂದು ತಿಂಗಳ ಹಿಂದಷ್ಟೇ ನಾನು ಸ್ಫೋಟ ಸಂಭವಿಸಿದ ಸ್ಥಳದಲ್ಲಿರುವ ಗೌರಿ ಶಂಕರ್ ದೇವಸ್ಥಾನಕ್ಕೆ ಭೇಟಿ ನೀಡಿದ್ದೆ. ಹೂವು-ಹಣ್ಣು ಖರೀದಿಸಿದ ಅದೇ ಸ್ಥಳದಲ್ಲಿ ಸ್ಫೋಟ ಸಂಭವಿಸಿರುವುದು ಆತಂಕಕಾರಿ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Nov 12, 2025 05:32 PM