ದೆಹಲಿ: ಸಿಆರ್​ಪಿಎಫ್​ ಸ್ಕೂಲ್ ಎದುರು ನಿಗೂಢ ಸ್ಫೋಟ

ದೆಹಲಿ: ಸಿಆರ್​ಪಿಎಫ್​ ಸ್ಕೂಲ್ ಎದುರು ನಿಗೂಢ ಸ್ಫೋಟ
|

Updated on:Oct 20, 2024 | 10:22 AM

ದೆಹಲಿಯ ರೋಹಿಣಿಯಲ್ಲಿರುವ ಸಿಆರ್​ಪಿಎಫ್​ ಸ್ಕೂಲ್ ಎದುರು ನಿಗೂಢ ಸ್ಫೋಟ ಸಂಭವಿಸಿದೆ. ಬೆಳಗ್ಗೆ 7.50ರ ವೇಳೆಗೆ ಸ್ಫೋಟದ ಬಗ್ಗೆ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಲಾಯಿತು, ತಕ್ಷಣವೇ ಎರಡು ಅಗ್ನಿಶಾಮಕ ವಾಹನಗಳು ಘಟನೆ ಸ್ಥಳಕ್ಕೆ ಬಂದಿದ್ದವು. ಘಟನೆಯ ಕುರಿತು ಹೆಚ್ಚಿನ ವಿವರಗಳಿಗಾಗಿ ಅಗ್ನಿಶಾಮಕ ದಳದ ತಂಡಗಳು ಪ್ರದೇಶದಲ್ಲಿ ಶೋಧವನ್ನು ಮುಂದುವರೆಸಿವೆ.

ದೆಹಲಿಯ ರೋಹಿಣಿಯಲ್ಲಿರುವ ಸಿಆರ್​ಪಿಎಫ್​ ಸ್ಕೂಲ್ ಎದುರು ನಿಗೂಢ ಸ್ಫೋಟ ಸಂಭವಿಸಿದೆ. ಬೆಳಗ್ಗೆ 7.50ರ ವೇಳೆಗೆ ಸ್ಫೋಟದ ಬಗ್ಗೆ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಲಾಯಿತು, ತಕ್ಷಣವೇ ಎರಡು ಅಗ್ನಿಶಾಮಕ ವಾಹನಗಳು ಘಟನೆ ಸ್ಥಳಕ್ಕೆ ಬಂದಿದ್ದವು. ಘಟನೆಯ ಕುರಿತು ಹೆಚ್ಚಿನ ವಿವರಗಳಿಗಾಗಿ ಅಗ್ನಿಶಾಮಕ ದಳದ ತಂಡಗಳು ಪ್ರದೇಶದಲ್ಲಿ ಶೋಧವನ್ನು ಮುಂದುವರೆಸಿವೆ.

ಶಾಲೆಯ ಗೋಡೆಗೆ ಹಾನಿಯಾಗಿದೆ, ಆದರೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಫೋರೆನ್ಸಿಕ್ ತಂಡಗಳು ಮತ್ತು ದೆಹಲಿ ಪೊಲೀಸ್ ವಿಶೇಷ ಘಟಕದ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಸ್ಫೋಟಕ್ಕೆ ಕಾರಣವೇನು ಎಂಬುದನ್ನು ಗುರುತಿಸಲು ಪ್ರಯತ್ನಿಸುತ್ತಿದ್ದಾರೆ.

ಸ್ಥಳೀಯ ನಿವಾಸಿಯೊಬ್ಬರು ರೆಕಾರ್ಡ್ ಮಾಡಿದ ವೀಡಿಯೊವು ಸ್ಫೋಟದ ಸ್ಥಳದ ಸಮೀಪದಿಂದ ಹೊಗೆ ಹಬ್ಬುವುದನ್ನು ಕಾಣಬಹುದು. ಪ್ರತ್ಯಕ್ಷದರ್ಶಿಯೊಬ್ಬರು ಮಾತನಾಡಿ, ನಾನು ಮನೆಯಲ್ಲಿದ್ದೆ ಶಬ್ದ ಕೇಳಿ ಹೊರಗೆ ಬಂದು ನೋಡಿದಾಗ ಹೊಗೆಯು ತೀವ್ರವಾಗಿ ಆವರಿಸಿತ್ತು ಎಂದಿದ್ದಾರೆ. ಚರಂಡಿ ಮಾರ್ಗವನ್ನು ಪರಿಶೀಲಿಸಲಾಗುತ್ತಿದೆ.

ಸ್ಫೋಟದ ರಭಸಕ್ಕೆ ಶಾಲೆಯ ಬಳಿ ನಿಲ್ಲಿಸಿದ್ದ ಕಾರುಗಳ ಕಿಟಕಿ ಗಾಜುಗಳು ಒಡೆದು ಹೋಗಿವೆ ಮತ್ತು ಆ ಪ್ರದೇಶದಲ್ಲಿನ ಅಂಗಡಿಗಳ ಸೂಚನಾ ಫಲಕಗಳಿಗೆ ಹಾನಿಯಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ.

ಫೋರೆನ್ಸಿಕ್ ಸೈನ್ಸ್ ಲ್ಯಾಬೊರೇಟರಿ (ಎಫ್‌ಎಸ್‌ಎಲ್) ತಂಡವನ್ನು ತನಿಖೆಗಾಗಿ ಕರೆಯಲಾಗಿದೆ. ಏತನ್ಮಧ್ಯೆ, ದೆಹಲಿ ಪೊಲೀಸರ ವಿಶೇಷ ಕೋಶದ ತಂಡವು ಈಗಾಗಲೇ ಸ್ಥಳದಲ್ಲಿದ್ದು, ಘಟನೆಯ ಕುರಿತು ತನಿಖೆ ನಡೆಯುತ್ತಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

 

Published On - 10:22 am, Sun, 20 October 24

Follow us
ಬೆಂಗಳೂರು ಮಳೆ: ಸಿಲ್ಕ್​ಬೋರ್ಡ್​ ಜಂಕ್ಷನ್​​ನಲ್ಲಿ ರಸ್ತೆಯಲ್ಲಿ ನಿಂತ ನೀರು
ಬೆಂಗಳೂರು ಮಳೆ: ಸಿಲ್ಕ್​ಬೋರ್ಡ್​ ಜಂಕ್ಷನ್​​ನಲ್ಲಿ ರಸ್ತೆಯಲ್ಲಿ ನಿಂತ ನೀರು
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಯಾರೆಂದು ನಾಳೆ ಫೈನಲ್
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಯಾರೆಂದು ನಾಳೆ ಫೈನಲ್
ರೈಲು ಅಪಘಾತದಿಂದ 60 ಆನೆಗಳ ರಕ್ಷಣೆ; ಲೋಕೋ ಪೈಲಟ್ ಕಾರ್ಯಕ್ಕೆ ಮೆಚ್ಚುಗೆ
ರೈಲು ಅಪಘಾತದಿಂದ 60 ಆನೆಗಳ ರಕ್ಷಣೆ; ಲೋಕೋ ಪೈಲಟ್ ಕಾರ್ಯಕ್ಕೆ ಮೆಚ್ಚುಗೆ
ತೆಲಂಗಾಣದಲ್ಲಿ ಉತ್ಖನನದ ವೇಳೆ ಆಂಜನೇಯನ ಪ್ರತಿಮೆ ಪತ್ತೆ
ತೆಲಂಗಾಣದಲ್ಲಿ ಉತ್ಖನನದ ವೇಳೆ ಆಂಜನೇಯನ ಪ್ರತಿಮೆ ಪತ್ತೆ
ಮನೆ ಸದಸ್ಯರಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ ಸುದೀಪ್, ಎಲ್ಲರೂ ಎಲಿಮಿನೇಟ್?
ಮನೆ ಸದಸ್ಯರಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ ಸುದೀಪ್, ಎಲ್ಲರೂ ಎಲಿಮಿನೇಟ್?
ಈಡಿ ವ್ಯಾಪ್ತಿಯನ್ನು ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದೆ: ಸಚಿವ
ಈಡಿ ವ್ಯಾಪ್ತಿಯನ್ನು ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದೆ: ಸಚಿವ
ಬೆಂಗಳೂರು: ಜಿಟಿ ಜಿಟಿ ಮಳೆಯಲ್ಲಿ ಫೋಟೋಶೂಟ್ ಮಾಡಿಸಿಕೊಂಡ ಮುದ್ದಾದ ಜೋಡಿ
ಬೆಂಗಳೂರು: ಜಿಟಿ ಜಿಟಿ ಮಳೆಯಲ್ಲಿ ಫೋಟೋಶೂಟ್ ಮಾಡಿಸಿಕೊಂಡ ಮುದ್ದಾದ ಜೋಡಿ
Bangalore Rains: ಬೆಂಗಳೂರಿನಲ್ಲಿ ಮತ್ತೆ ಮಳೆ, ಧರೆಗುರುಳಿದ ಮರಗಳು
Bangalore Rains: ಬೆಂಗಳೂರಿನಲ್ಲಿ ಮತ್ತೆ ಮಳೆ, ಧರೆಗುರುಳಿದ ಮರಗಳು
ಲೋಕಸಭಾ ಚುನಾವಣೆಯಲ್ಲಿ ಸೋಲ್ತೀನಿ ಅಂತ ನನಗೆ ಗೊತ್ತಿತ್ತು: ಕೆಎಸ್ ಈಶ್ವರಪ್ಪ
ಲೋಕಸಭಾ ಚುನಾವಣೆಯಲ್ಲಿ ಸೋಲ್ತೀನಿ ಅಂತ ನನಗೆ ಗೊತ್ತಿತ್ತು: ಕೆಎಸ್ ಈಶ್ವರಪ್ಪ
ವಂಚನೆ ಕೇಸ್​ನಲ್ಲಿ ಪ್ರಲ್ಹಾದ್ ಜೋಶಿ ಪಾತ್ರ ಏನೂ ಇಲ್ಲ: ದೂರುದಾರೆ ಸ್ಪಷ್ಟನೆ
ವಂಚನೆ ಕೇಸ್​ನಲ್ಲಿ ಪ್ರಲ್ಹಾದ್ ಜೋಶಿ ಪಾತ್ರ ಏನೂ ಇಲ್ಲ: ದೂರುದಾರೆ ಸ್ಪಷ್ಟನೆ