ದೆಹಲಿಯಲ್ಲಿ ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ! ಉಭಯ ಕುಶಲೋಪರಿ

Updated on: Jun 02, 2026 | 12:38 PM

ನೂತನ ಸಚಿವ ಸಂಪುಟ ರಚನೆಯ ವಿಚಾರವಾಗಿ ಹೈಕಮಾಂಡ್ ಜತೆ ಸಭೆಗಾಗಿ ದೆಹಲಿಯಲ್ಲಿರುವ ನಿರ್ಗಮಿತ ಸಿಎಂ ಸಿದ್ದರಾಮಯ್ಯ ಐಟಿಸಿ ಮೌರ್ಯ ಹೋಟೆಲ್ ಬಳಿ ಕೇಂದ್ರ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರನ್ನು ಆಕಸ್ಮಿಕವಾಗಿ ಭೇಟಿಯಾದರು. ಇದೇ ವೇಳೆ, ಉಭಯ ನಾಯಕರು ಆತ್ಮೀಯವಾಗಿ ಸೌಜನ್ಯದ ಮಾತುಕತೆ ನಡೆಸಿದ್ದಾರೆ.

ನವದೆಹಲಿ, ಜೂನ್ 2: ರಾಜ್ಯದಲ್ಲಿ ಡಿಕೆ ಶಿವಕುಮಾರ್ ನೇತೃತ್ವದ ನೂತನ ಸಚಿವ ಸಂಪುಟ ರಚನೆ ಹಾಗೂ ಮಂತ್ರಿಗಳ ಪಟ್ಟಿ ಅಂತಿಮಗೊಳಿಸುವ ಮಹತ್ವದ ಕಸರತ್ತಿಗಾಗಿ ಕಾಂಗ್ರೆಸ್ ಹೈಕಮಾಂಡ್ ಜತೆ ಮಾತುಕತೆಗಾಗಿ ದೆಹಲಿಗೆ ಆಗಮಿಸಿರುವ ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುವಿಲ್ಲದ ಸಭೆಗಳಲ್ಲಿ ನಿರತರಾಗಿದ್ದಾರೆ. ಈ ರಾಜಕೀಯ ಬೆಳವಣಿಗೆಗಳ ನಡುವೆ, ದೆಹಲಿಯ ಐಟಿಸಿ ಮೌರ್ಯ ಹೋಟೆಲ್‌ನಿಂದ ಹೊರಬರುತ್ತಿದ್ದ ಸಿದ್ದರಾಮಯ್ಯಗೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರು ಎದುರಾಗಿದ್ದಾರೆ. ಈ ವೇಳೆ ಉಭಯ ನಾಯಕರು ಅತ್ಯಂತ ಸೌಜನ್ಯದಿಂದ ಪರಸ್ಪರ ಹಸ್ತಲಾಘವ ಮಾಡಿ, ನಗುಮುಖದಿಂದಲೇ ಉಭಯಕುಶಲೋಪರಿ ವಿಚಾರಿಸಿಕೊಂಡಿದ್ದಾರೆ. ‘ಹೇಗಿದ್ದೀರಾ?’ ಎಂದು ಜೈಶಂಕರ್ ಅವರ ಕ್ಷೇಮ ಸಮಾಚಾರ ವಿಚಾರಿಸಿದ ಸಿದ್ದರಾಮಯ್ಯ, ಕೆಲ ಕ್ಷಣಗಳ ಕಾಲ ಆತ್ಮೀಯವಾಗಿ ಮಾತುಕತೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More