ರಾಷ್ಟ್ರದ ರಾಜಧಾನಿಯಲ್ಲಿ ಬೆಂಕಿಯುಗುಳುತ್ತಿರುವ ಸೂರ್ಯ, ಮಂಗಳವಾರದ ತಾಪಮಾನ 52.3 ಡಿಗ್ರಿ ಸೆಲ್ಸಿಯಸ್!

ಲೋಕಸಭಾ ಚುನಾವಣೆಯ ಕೊನೆ ಹಂತದ ಮತದಾನ ಉತ್ತರ ಭಾರತದ ಕೆಲ ಕ್ಷೇತ್ರಗಳಲ್ಲೂ ನಡೆಯಲಿದೆ. ಜನ ಮನೆಗಳಿಂದ ಹೊರಬಂದು ತಮ್ಮ ಹಕ್ಕು ಚಲಾಯಿಸುವ ಮುನ್ನ ಎರಡೆರಡು ಬಾರಿ ಯೋಚಿಸಲಿದ್ದಾರೆ. ಬೆಂಗಳೂರಲ್ಲಿ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ತಲುಪಿದರೆ ನಾವು ಒದ್ದಾಡುತ್ತೇವೆ. ಇನ್ನು 50+ ತಾಪಮಾನ ಅಂದರೆ ಪರಿಸ್ಥಿತಿ ಹೇಗಿರಬೇಡ?

ರಾಷ್ಟ್ರದ ರಾಜಧಾನಿಯಲ್ಲಿ ಬೆಂಕಿಯುಗುಳುತ್ತಿರುವ ಸೂರ್ಯ, ಮಂಗಳವಾರದ ತಾಪಮಾನ 52.3 ಡಿಗ್ರಿ ಸೆಲ್ಸಿಯಸ್!
|

Updated on: May 30, 2024 | 4:18 PM

ದೆಹಲಿ: ರಾಷ್ಟ್ರದ ರಾಜಧಾನಿ (National capital Delhi) ಕಾದ ಹೆಂಚಿನಂತಾಗಿ ಅಕ್ಷರಶಃ ಬೆಂಕಿಯುಗುಳುತ್ತಿದೆ. ಕೇವಲ ದೆಹಲಿ ಮಾತ್ರವಲ್ಲ ಇಡೀ ಉತ್ತರ ಭಾರತದಲ್ಲಿ ತಾಪಮಾನ (temperature) ಅಸಹನೀಯವಾಗಿದೆ. ಟಿವಿ9 ದೆಹಲಿ ವರದಿಗಾರ ನೀಡುವ ಮಾಹಿತಿ ಪ್ರಕಾರ ದೆಹಲಿಯಲ್ಲಿ ಮಂಗಳವಾರಂದು ತಾಪಮಾನ 52.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು ಇದು ನಗರದ ಕಳೆದ 50 ವರ್ಷಗಳ ಇತಿಹಾಸದಲ್ಲಿ ದಾಖಲಾಗಿರುವ ಅತ್ಯಧಿಕ ತಾಪಮಾನವಂತೆ! ಸುಡುವ ಬೇಸಿಗೆಯಿಂದಾಗಿ ದೆಹಲಿಯಲ್ಲಿ ಅಗ್ನಿ ಅವಘಡಗಳು (fire mishaps) ಹೆಚ್ಚು ಸಂಭವಿಸುತ್ತಿವೆ ಮತ್ತು ಬುಧವಾರ ಒಂದೇ ದಿನ 224 ಕರೆಗಳು ಅಗ್ನಿಶಾಮಕ ದಳ ಕಚೇರಿಗಳಿಗೆ ಹೋಗಿವೆಯಂತೆ. ದೆಹಲಿಯಂತೆ ಬಿಹಾರ ಸಹ ಕೊತಕೊತ ಕುದಿಯುತ್ತಿದೆ, ಅಲ್ಲಿನ ಭಿಗುಸರಾಯ್ ನಗರದಲ್ಲಿ ಶಾಲೆಯೊಂದರ ವಿದ್ಯಾರ್ಥಿನಿಯರು ಬಿಸಿಲಿನ ಝಳಕ್ಕೆ ಪ್ರಜ್ಞೆ ತಪ್ಪಿ ಬಿದ್ದುಬಿಟ್ಟಿದ್ದಾರೆ. ಲೋಕಸಭಾ ಚುನಾವಣೆಯ ಕೊನೆ ಹಂತದ ಮತದಾನ ಉತ್ತರ ಭಾರತದ ಕೆಲ ಕ್ಷೇತ್ರಗಳಲ್ಲೂ ನಡೆಯಲಿದೆ. ಜನ ಮನೆಗಳಿಂದ ಹೊರಬಂದು ತಮ್ಮ ಹಕ್ಕು ಚಲಾಯಿಸುವ ಮುನ್ನ ಎರಡೆರಡು ಬಾರಿ ಯೋಚಿಸಲಿದ್ದಾರೆ. ಬೆಂಗಳೂರಲ್ಲಿ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ತಲುಪಿದರೆ ನಾವು ಒದ್ದಾಡುತ್ತೇವೆ. ಇನ್ನು 50+ ತಾಪಮಾನ ಅಂದರೆ ಪರಿಸ್ಥಿತಿ ಹೇಗಿರಬೇಡ? ಮತಷ್ಟು ಕೆಟ್ಟ ಸುದ್ದಿಯೆಂದರೆ ಈ ವಾತಾವರಣ ಇನ್ನೂ ಎರಡು-ಮೂರು ವಾರಗಳ ಕಾಲ ಮುಂದುವರಿಯಲಿದೆಯಂತೆ!

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ದೆಹಲಿಯಲ್ಲಿ ಮತ್ತೊಂದು ಅಗ್ನಿ ಅವಘಡ, ವಸತಿ ಕಟ್ಟಡದಲ್ಲಿ ಕಾಣಿಸಿಕೊಂಡ ಬೆಂಕಿ, 3 ಮಂದಿ ಸಾವು

Follow us
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!