ರಾಷ್ಟ್ರದ ರಾಜಧಾನಿಯಲ್ಲಿ ಬೆಂಕಿಯುಗುಳುತ್ತಿರುವ ಸೂರ್ಯ, ಮಂಗಳವಾರದ ತಾಪಮಾನ 52.3 ಡಿಗ್ರಿ ಸೆಲ್ಸಿಯಸ್!

ಲೋಕಸಭಾ ಚುನಾವಣೆಯ ಕೊನೆ ಹಂತದ ಮತದಾನ ಉತ್ತರ ಭಾರತದ ಕೆಲ ಕ್ಷೇತ್ರಗಳಲ್ಲೂ ನಡೆಯಲಿದೆ. ಜನ ಮನೆಗಳಿಂದ ಹೊರಬಂದು ತಮ್ಮ ಹಕ್ಕು ಚಲಾಯಿಸುವ ಮುನ್ನ ಎರಡೆರಡು ಬಾರಿ ಯೋಚಿಸಲಿದ್ದಾರೆ. ಬೆಂಗಳೂರಲ್ಲಿ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ತಲುಪಿದರೆ ನಾವು ಒದ್ದಾಡುತ್ತೇವೆ. ಇನ್ನು 50+ ತಾಪಮಾನ ಅಂದರೆ ಪರಿಸ್ಥಿತಿ ಹೇಗಿರಬೇಡ?

ರಾಷ್ಟ್ರದ ರಾಜಧಾನಿಯಲ್ಲಿ ಬೆಂಕಿಯುಗುಳುತ್ತಿರುವ ಸೂರ್ಯ, ಮಂಗಳವಾರದ ತಾಪಮಾನ 52.3 ಡಿಗ್ರಿ ಸೆಲ್ಸಿಯಸ್!
|

Updated on: May 30, 2024 | 4:18 PM

ದೆಹಲಿ: ರಾಷ್ಟ್ರದ ರಾಜಧಾನಿ (National capital Delhi) ಕಾದ ಹೆಂಚಿನಂತಾಗಿ ಅಕ್ಷರಶಃ ಬೆಂಕಿಯುಗುಳುತ್ತಿದೆ. ಕೇವಲ ದೆಹಲಿ ಮಾತ್ರವಲ್ಲ ಇಡೀ ಉತ್ತರ ಭಾರತದಲ್ಲಿ ತಾಪಮಾನ (temperature) ಅಸಹನೀಯವಾಗಿದೆ. ಟಿವಿ9 ದೆಹಲಿ ವರದಿಗಾರ ನೀಡುವ ಮಾಹಿತಿ ಪ್ರಕಾರ ದೆಹಲಿಯಲ್ಲಿ ಮಂಗಳವಾರಂದು ತಾಪಮಾನ 52.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು ಇದು ನಗರದ ಕಳೆದ 50 ವರ್ಷಗಳ ಇತಿಹಾಸದಲ್ಲಿ ದಾಖಲಾಗಿರುವ ಅತ್ಯಧಿಕ ತಾಪಮಾನವಂತೆ! ಸುಡುವ ಬೇಸಿಗೆಯಿಂದಾಗಿ ದೆಹಲಿಯಲ್ಲಿ ಅಗ್ನಿ ಅವಘಡಗಳು (fire mishaps) ಹೆಚ್ಚು ಸಂಭವಿಸುತ್ತಿವೆ ಮತ್ತು ಬುಧವಾರ ಒಂದೇ ದಿನ 224 ಕರೆಗಳು ಅಗ್ನಿಶಾಮಕ ದಳ ಕಚೇರಿಗಳಿಗೆ ಹೋಗಿವೆಯಂತೆ. ದೆಹಲಿಯಂತೆ ಬಿಹಾರ ಸಹ ಕೊತಕೊತ ಕುದಿಯುತ್ತಿದೆ, ಅಲ್ಲಿನ ಭಿಗುಸರಾಯ್ ನಗರದಲ್ಲಿ ಶಾಲೆಯೊಂದರ ವಿದ್ಯಾರ್ಥಿನಿಯರು ಬಿಸಿಲಿನ ಝಳಕ್ಕೆ ಪ್ರಜ್ಞೆ ತಪ್ಪಿ ಬಿದ್ದುಬಿಟ್ಟಿದ್ದಾರೆ. ಲೋಕಸಭಾ ಚುನಾವಣೆಯ ಕೊನೆ ಹಂತದ ಮತದಾನ ಉತ್ತರ ಭಾರತದ ಕೆಲ ಕ್ಷೇತ್ರಗಳಲ್ಲೂ ನಡೆಯಲಿದೆ. ಜನ ಮನೆಗಳಿಂದ ಹೊರಬಂದು ತಮ್ಮ ಹಕ್ಕು ಚಲಾಯಿಸುವ ಮುನ್ನ ಎರಡೆರಡು ಬಾರಿ ಯೋಚಿಸಲಿದ್ದಾರೆ. ಬೆಂಗಳೂರಲ್ಲಿ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ತಲುಪಿದರೆ ನಾವು ಒದ್ದಾಡುತ್ತೇವೆ. ಇನ್ನು 50+ ತಾಪಮಾನ ಅಂದರೆ ಪರಿಸ್ಥಿತಿ ಹೇಗಿರಬೇಡ? ಮತಷ್ಟು ಕೆಟ್ಟ ಸುದ್ದಿಯೆಂದರೆ ಈ ವಾತಾವರಣ ಇನ್ನೂ ಎರಡು-ಮೂರು ವಾರಗಳ ಕಾಲ ಮುಂದುವರಿಯಲಿದೆಯಂತೆ!

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ದೆಹಲಿಯಲ್ಲಿ ಮತ್ತೊಂದು ಅಗ್ನಿ ಅವಘಡ, ವಸತಿ ಕಟ್ಟಡದಲ್ಲಿ ಕಾಣಿಸಿಕೊಂಡ ಬೆಂಕಿ, 3 ಮಂದಿ ಸಾವು

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್