CM Siddaramaiah; ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ ಅಡಚಣೆಯಿಲ್ಲದೆ ಲಭ್ಯವಾಗಿಸುವಂತೆ ಡಿಸಿಗಳಿಗೆ ಸೂಚಿಸಲಾಗಿದೆ: ಸಿದ್ದರಾಮಯ್ಯ, ಮುಖ್ಯಮಂತ್ರಿ

ಅರುಣ್​ ಕುಮಾರ್​ ಬೆಳ್ಳಿ

Updated on: Jun 05, 2023 | 5:48 PM

ಪ್ರವಾಹದಂಥ ಪರಿಸ್ಥಿತಿ ತಲೆದೋರಿದರೆ, ಅದನ್ನು ಎದುರಿಸಲು ಸನ್ನದ್ಧರಾಗಿರುವಂತೆಯೂ ಎಲ್ಲ ಡಿಸಿಗಳಿಗೆ ತಿಳಿಸಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

ದಾವಣಗೆರೆ: ರಾಜ್ಯದೆಲ್ಲೆಡೆ ಕೃಷಿ ಚಟಿವಟಿಕೆಗಳು ಆರಂಭವಾಗಿರುವುದರಿಂದ ರೈತಾಪಿ ಜನರಿಗೆ ಬಿತ್ತನೆ ಬೀಜ, ರಸಗೊಬ್ಬರ ಮತ್ತು ಕೀಟನಾಶಕಗಳು (pesticides) ಯಾವುದೇ ಅಡಚಣೆಯಿಲ್ಲದೆ ಲಭ್ಯವಾಗುವಂತೆ ನೋಡಿಕೊಳ್ಳಲು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ (deputy commissioners) ವಿಡಿಯೋ ಕಾನ್ಪರೆನ್ಸಿಂಗ್ ಮೂಲಕ ತಿಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಇಂದು ದಾವಣಗೆರೆಯಲ್ಲಿ ಹೇಳಿದರು. ಹಾಗೆಯೇ, ಮಳೆಗಾಲದಲ್ಲಿ ಪ್ರವಾಹಗಳು ಉಂಟಾಗುವ ಭೀತಿ ಇರೋದ್ರಿಂದ ಹಾಗಾಗದಂತೆ ಪ್ರಾರ್ಥಿಸೋಣ ಆದರೆ ಒಂದು ಪಕ್ಷ ಅಂಥ ಪರಿಸ್ಥಿತಿ ತಲೆದೋರಿದರೆ, ಅದನ್ನು ಎದುರಿಸಲು ಸನ್ನದ್ಧರಾಗಿರುವಂತೆಯೂ ಎಲ್ಲ ಡಿಸಿಗಳಿಗೆ ತಿಳಿಸಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.