ವಿಧಾನ ಸಭಾ ಚುನಾವಣೆಯಲ್ಲಿ ಸೋತ ರಾಜುಗೌಡಗೂ ಬಿಜೆಪಿ ರಾಜ್ಯಾಧ್ಯಕ್ಷನಾಗುವ ಆಸೆ!

ರಾಜು ಗೌಡ, ಆಫ್ ಕೋರ್ಸ್ ಯುವಕ ಮತ್ತು ಪಕ್ಷದ ನಿಷ್ಠಾವಂತ ಕಾರ್ಯಕರ್ತ, ಅದರಲ್ಲಿ ಎರಡು ಮಾತಿಲ್ಲ. ಆದರೆ ಅವರು ಯಾದಗಿರಿ ಜಿಲ್ಲೆಯೊಂದನ್ನು ಬಿಟ್ಟರೆ, ಪಕ್ಕದ ಕಲಬುರಗಿ, ಬೀದರ್ ಮತ್ತು ರಾಯಚೂರು ಜಿಲ್ಲೆಗಳ ಜನರಿಗೆ ಹೆಚ್ಚು ಪರಿಚಿತರಲ್ಲ. ಇನ್ನು ಕೇಂದ್ರ, ದಕ್ಷಿಣ ಮತ್ತು ಕರಾವಳಿ ಕರ್ನಾಟಕದಲ್ಲಿ ಜನ ಅವರನ್ನು ಗುರುತಿಸಿಯಾರೇ?

|

Updated on: Sep 12, 2023 | 12:28 PM

ಯಾದಗಿರಿ: ವಿಧಾನ ಸಭಾ ಚುನಾವಣೆಯಲ್ಲಿ (Assembly polls) ಹೀನಾಯ ಸೋಲು ಅನುಭವಿಸಿದ ಬಳಿಕ ರಾಜ್ಯ ಬಿಜೆಪಿ ನಾಯಕರು ಹತಾಷರಾಗಿರೋದು ಸತ್ಯ. ಆದರೆ ವಿಡಂಬನೆಯ ಸಂಗತಿಯೆಂದರೆ ಅವರಲ್ಲಿ ಅಧಿಕಾರದ ಲಾಲಸೆ ಬತ್ತಿಲ್ಲ. ವಿಡಯೋದಲ್ಲಿ ಕಾಣುತ್ತಿರೋರು ಚುನಾವಣೆಯಲ್ಲಿ ಸೋತ ಬಿಜೆಪಿ ನಾಯಕ ನರಸಿಂಹ ನಾಯಕ್ (Narasimha Nayak) ಅಲಿಯಾಸ್ ರಾಜುಗೌಡ. ಇವರು ರಾಜುಗೌಡ ಅಂತ ಪರಿಚಿತರು. ಎಲೆಕ್ಷನ್ ನಲ್ಲಿ ಸೋತರೂ ಇವರು ಬಿಜೆಪಿಯ ರಾಜ್ಯಾಧ್ಯಕ್ಷ (BJP state unit president) ನಾಯಕನಾಗುವ ಆಸೆ ಇಟ್ಟುಕೊಂಡಿದ್ದಾರೆ! ಪಕ್ಷದ ಹಿರಿಯ ಮತ್ತು ಪ್ರಬಲ ನಾಯಕರು ತೆಪ್ಪಗೆ ಕುಳಿತಿರೋದು ಕನ್ನಡಿಗರಿಗೆ ಗೊತ್ತಿಲ್ಲದ ಸಂಗತಿಯೇನಲ್ಲ. ರಾಜಕೀಯ ನಾಯಕರಿಗೆ ಆಸೆ ಆಕಾಂಕ್ಷೆ ಇರಬಾರದು ಅಂತೇನಿಲ್ಲ, ಆದರೆ ದುರಾಸೆ ಇರಬಾರದು ಮಾರಾಯ್ರೇ. ಇದನ್ನು ಯಾಕೆ ಹೇಳಬೇಕಾಗಿದೆಯೆಂದರೆ, ಇಂದು ಜಿಲ್ಲೆಯ ಹುಣಸಗಿಯಲ್ಲಿ ಪತ್ರಿಕಾ ಗೋಷ್ಟಿ ನಡೆಸಿ ಮಾತಾಡಿದ ರಾಜು ಗೌಡ, ಆಫ್ ಕೋರ್ಸ್ ಯುವಕ ಮತ್ತು ಪಕ್ಷದ ನಿಷ್ಠಾವಂತ ಕಾರ್ಯಕರ್ತ, ಅದರಲ್ಲಿ ಎರಡು ಮಾತಿಲ್ಲ. ಆದರೆ ಅವರು ಯಾದಗಿರಿ ಜಿಲ್ಲೆಯೊಂದನ್ನು ಬಿಟ್ಟರೆ, ಪಕ್ಕದ ಕಲಬುರಗಿ, ಬೀದರ್ ಮತ್ತು ರಾಯಚೂರು ಜಿಲ್ಲೆಗಳ ಜನರಿಗೆ ಹೆಚ್ಚು ಪರಿಚಿತರಲ್ಲ. ಇನ್ನು ಕೇಂದ್ರ, ದಕ್ಷಿಣ ಮತ್ತು ಕರಾವಳಿ ಕರ್ನಾಟಕದಲ್ಲಿ ಜನ ಅವರನ್ನು ಗುರುತಿಸಿಯಾರೇ? ಅವರು ಮಾಸ್ ಲೀಡರ್ ಅಂತ ಗುರುತಿಸಿಕೊಂಡವರೂ ಅಲ್ಲ. ಪರಿಸ್ಥಿತಿ ಹೀಗಿರುವಾಗ ಅವರು ಬಿಜೆಪಿ ರಾಜ್ಯಾಧ್ಯಕ್ಷನ ಸ್ಥಾನಕ್ಕೆ ಪ್ರಬಲ ಆಕಾಂಕ್ಷಿ ಅಂತ ಅದ್ಹೇಗೆ ಹೇಳುತ್ತಾರೋ?

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಕಿಮ್ಸ್​ ಆವರಣದಲ್ಲೇ ಡಿಜೆ ಹಾಡಿಗೆ ಕುಣಿದ ವಿದ್ಯಾರ್ಥಿಗಳು; ವಿಡಿಯೋ ನೋಡಿ
ಕಿಮ್ಸ್​ ಆವರಣದಲ್ಲೇ ಡಿಜೆ ಹಾಡಿಗೆ ಕುಣಿದ ವಿದ್ಯಾರ್ಥಿಗಳು; ವಿಡಿಯೋ ನೋಡಿ
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್
ಬಂದ್ ಆಚರಿಸುವ ಬದಲು ಸರ್ಕಾರದ ಪ್ರಯತ್ನಗಳಿಗೆ ಸಹಕಾರ ನೀಡಲಿ:ಡಿಕೆ ಶಿವಕುಮಾರ್
ಬಂದ್ ಆಚರಿಸುವ ಬದಲು ಸರ್ಕಾರದ ಪ್ರಯತ್ನಗಳಿಗೆ ಸಹಕಾರ ನೀಡಲಿ:ಡಿಕೆ ಶಿವಕುಮಾರ್