AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi Case; ರಾಜಕೀಯವಾಗಿ ಎಷ್ಟೇ ಬದ್ಧ ವೈರತ್ವವಿದ್ದರೂ, ಕುಟುಂಬ ಮತ್ತು ಮನೆತನಗಳ ಬಗ್ಗೆ ಅವಹೇಳನಕಾರಿಯಾಗಿ ಮಾತಾಡಬಾರದು: ಪ್ರತಾಪ್ ಸಿಂಹ

Rahul Gandhi Case; ರಾಜಕೀಯವಾಗಿ ಎಷ್ಟೇ ಬದ್ಧ ವೈರತ್ವವಿದ್ದರೂ, ಕುಟುಂಬ ಮತ್ತು ಮನೆತನಗಳ ಬಗ್ಗೆ ಅವಹೇಳನಕಾರಿಯಾಗಿ ಮಾತಾಡಬಾರದು: ಪ್ರತಾಪ್ ಸಿಂಹ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Mar 24, 2023 | 4:20 PM

Share

ಇನ್ನು ಮುಂದೆ ರಾಜಕೀಯ ನಾಯಕರು ತಮ್ಮ ಎದುರಾಳಿಗಳ ವಿರುದ್ದ ಅವಹೇಳನಕಾರಿಯಾಗಿ ಮಾತಾಡುವುದು, ಹೀಯಾಳಿಸುವುದು ನಿಲ್ಲುವಂತಾಗಲೂ ಈ ಪ್ರಕರಣ ನಾಂದಿಯಾಗಲಿದೆ ಎಂದು ಸಂಸದ ಹೇಳಿದರು.

ಬೆಳಗಾವಿ: ಕಾಂಗ್ರೆಸ್ ಧುರೀಣ ರಾಹುಲ್ ಗಾಂಧಿಯವರನ್ನು (Rahul Gandhi) ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿರುವ ಕುರಿತು ನಗರದಲ್ಲಿಂದು ಪ್ರತಿಕ್ರಿಯೆ ನೀಡಿದ ಸಂಸದ ಪ್ರತಾಪ್ ಸಿಂಹ (Pratap Simha); ಕೋರ್ಟ್ ಅವರನ್ನು ಮಾನಹಾನಿ ಪ್ರಕರಣವೊಂದರಲ್ಲಿ ದೋಷಿಯೆಂದು (guilty) ಪರಿಗಣಿಸಿ ಜೈಲು ಶಿಕ್ಷೆ ವಿಧಿಸಿರುವುದರಿಂದ ಅನರ್ಹಗೊಳಿಸಲಾಗಿದೆ ಎಂದರು. ಇನ್ನು ಮುಂದೆ ರಾಜಕೀಯ ನಾಯಕರು ತಮ್ಮ ಎದುರಾಳಿಗಳ ವಿರುದ್ದ ಅವಹೇಳನಕಾರಿಯಾಗಿ ಮಾತಾಡುವುದು, ಹೀಯಾಳಿಸುವುದು ನಿಲ್ಲುವಂತಾಗಲೂ ಈ ಪ್ರಕರಣ ನಾಂದಿಯಾಗಲಿದೆ ಎಂದು ಸಂಸದ ಹೇಳಿದರು. ರಾಜಕೀಯವಾಗಿ ಎಷ್ಟೇ ವೈರತ್ವವಿದ್ದರೂ ಯಾವುದೇ ಪಕ್ಷದ ನಾಯಕನ ಕುಟುಂಬ, ಮನೆತನದ ಬಗ್ಗೆ ಕಟುವಾಗಿ ಮತ್ತು ಹಗುರವಾಗಿ ಮಾತಾಡಬಾರದು ಎಂದು ಪ್ರತಾಪ್ ಸಿಂಹ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.