ಹಾಸನ: ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್ ಡಿ ದೇವೇಗೌಡರ (HD Devegowda) ಕುಟುಂಬಕ್ಕೆ ಸವಾಲೆಸೆದಿದ್ದ ಬಿಜೆಪಿ ಅಭ್ಯರ್ಥಿ ಮತ್ತು ಹಾಲಿ ಶಾಸಕ ಪ್ರೀತಂ ಗೌಡ (Preetham Gowda) ಸೋಲುಂಡಿದ್ದಾರೆ. ಅವರ ಸವಾಲನ್ನು ಹೆಚ್ ಡಿ ರೇವಣ್ಣ ಮತ್ತು ಭವಾನಿ ರೇವಣ್ಣ ಪ್ರತಿಷ್ಠೆಯ ಪ್ರಶ್ನೆಯಾಗಿ ಪರಿಗಣಿಸಿದ್ದರು. ಫಲಿತಾಂಶ ಪ್ರಕಟವಾದ ಬಳಿಕ ಟಿವಿ9 ವರದಿಗಾರನೊಂದಿಗೆ ಮಾತಾಡಿದ ಪ್ರೀತಂ ಗೌಡ ತಾನು ಕ್ಷೇತ್ರದಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಗಳನ್ನು (development works) ಜನ ಮೆಚ್ಚಿದ್ದಾರೆ ಅದರ ಫಲವಾಗಿಯೇ ಕಳೆದ ಬಾರಿಗಿಂತ ಹೆಚ್ಚು ವೋಟು ಗಳಿಸಲು ಸಾಧ್ಯವಾಗಿದೆ ಎಂದು ಹೇಳಿದರು. ಯಾವ ಆಯಾಮದಲ್ಲಿ ತಾನು ಹಿಂದೆ ಬಿದ್ದಿದ್ದೇನೆ ಅನ್ನೋದನ್ನು ಪರಾಮರ್ಶಿಸಿ ಮುಂದಿನ ಸಲ ಹೆಚ್ಚಿನ ತಯಾರಿಯೊಂದಿಗೆ ಸ್ಪರ್ಧಿಸುವುದಾಗಿ ಅವರು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ