ಗೃಹ ಇಲಾಖೆಗೆ ಇಲ್ಲದ ಮಾಹಿತಿ ಒಬ್ಬ ಎಂಎಲ್​ಸಿಗೆ ಇದೆಯೆಂದರೆ ಅದು ಇಂಟಲಿಜೆನ್ಸ್ ವೈಫಲ್ಯ: ಬಸವರಾಜ ಬೊಮ್ಮಾಯಿ

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅಪರಾಧಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು. ಮಹಿಳೆಯರ ಮೇಲೆ ದೌರ್ಜನ್ಯದ ಪ್ರಕರಣಗಳು ಪದೇಪದೆ ನಡೆಯುತ್ತಿವೆ, ಗೂಂಡಾ ಮತ್ತು ರೌಡಿಶೀಟರ್ ಗಳು ರಾಜಾರೋಷವಾಗಿ ತಿರುಗಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೇಳಿದರು.

ಗೃಹ ಇಲಾಖೆಗೆ ಇಲ್ಲದ ಮಾಹಿತಿ ಒಬ್ಬ ಎಂಎಲ್​ಸಿಗೆ ಇದೆಯೆಂದರೆ ಅದು ಇಂಟಲಿಜೆನ್ಸ್ ವೈಫಲ್ಯ: ಬಸವರಾಜ ಬೊಮ್ಮಾಯಿ
|

Updated on: Jan 04, 2024 | 5:44 PM

ಬೆಂಗಳೂರು: ಬಹಳ ದಿನಗಳ ಬಳಿಕ ಮಾಧ್ಯಮಗಳ ಮುಂದೆ ಕಾಣಿಸಿಕೊಳ್ಳುತ್ತಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ನಗರದಲ್ಲಿಂದು ಪತ್ರಿಕಾ ಗೋಷ್ಟಿ ನಡೆಸಿ ಮಾತಾಡುವಾಗ, ಕೋಮು ಪ್ರಚೋದನೆ ಮತ್ತು ಇಡೀ ರಾಜ್ಯವೇ ಬೆಚ್ಚಿಬೀಳುವಂಥ ಹೇಳಿಕೆಯನ್ನು ವಿಧಾನ ಪರಿಷತ ಸದಸ್ಯ ಬಿಕೆ ಹರಿಪ್ರಸಾದ್ (BK Hariprasad) ನೀಡಿದ್ದರೂ ಗೃಹಸಚಿವ ಜಿ ಪರಮೇಶ್ವರ್ (G Parameshwara) ಅವರು ತಮ್ಮ ಪಕ್ಷದ ಹಿರಿಯ ನಾಯಕನ ಬಗ್ಗೆ ಮೃದು ಧೋರಣೆ ತಳೆದಿರುವುದು ಮತ್ತು ಯಾವುದೇ ಕ್ರಮ ಕೈಗೊಳ್ಳದಿರುವುದು ದಿಗ್ಭ್ರಮೆ ಮೂಡಿಸುತ್ತದೆ ಎಂದು ಹೇಳಿದರು. ಗೃಹ ಇಲಾಖೆಗೆ ಗೊತ್ತಿರದ ಮಾಹಿತಿ ಒಬ್ಬ ಎಂಎಲ್ ಸಿ ಗೆ ಇದೆ ಅಂದರೆ ಅದು ಗುಪ್ತಚರ ಇಲಾಖೆ ಮತ್ತು ಸರ್ಕಾರ ವೈಫಲ್ಯವಲ್ಲದೆ ಮತ್ತೇನೂ ಅಲ್ಲ ಅಂತ ಬೊಮ್ಮಾಯಿ ಹೇಳಿದರು. ಗೃಹ ಸಚಿವರು ಹರಿಪ್ರಸಾದ್ ಹೇಳಿಕೆಯನ್ನು ಬಹಳ ಹಗುರವಾಗಿ ಪರಿಗಣಿಸಿದಂತಿದೆ, ಇದೇ ಹೇಳಿಕೆಕಯನ್ನು ಬೇರೆ ಯಾರಾದರೂ ನೀಡಿದ್ದರೆ ಪೊಲೀಸ್ ಠಾಣೆಗೆ ಎಳೆದೊಯ್ದು ವಿಚಾರಣೆ ನಡೆಸುತ್ತಿದ್ದರು ಎಂದು ಅವರು ಹೇಳಿದರು. ಪೊಲೀಸರು ವಿಚಾರಣೆ ನಡೆಸಿದರೆ ಎಲ್ಲ ಮಾಹಿತಿ ನೀಡುವುದಾಗಿ ಖುದ್ದು ಹರಿಪ್ರಸಾದ್ ಹೇಳಿರುವಾಗ, ಗೃಹ ಇಲಾಖೆ ಮೀನಮೇಷ ಎಣಿಸುತ್ತಿರುವುದು ಯಾಕೆ ಎಂದು ಬೊಮ್ಮಾಯಿ ಪ್ರಶ್ನಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ