ತನ್ನ ಸಹಿಯ ಫೋರ್ಜರಿಯಾಗಿದ್ದರೂ ಕುಮಾರಸ್ವಾಮಿ ಯಾಕೆ ದೂರು ದಾಖಲಿಸಿಲ್ಲ? ಡಿಕೆ ಶಿವಕುಮಾರ್

Updated on: Aug 27, 2024 | 5:20 PM

ತಮ್ಮ ಕಚೇರಿಯಲ್ಲಿ ಪೆಂಡಿಂಗ್ ಇರುವ ಪ್ರಕರಣಗಳಿಗೆ ರಾಜ್ಯಪಾಲರು ಶೀಘ್ರವಾಗಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಬೇಕೆಂದು ಅಗ್ರಹಿಸಿ ಆಗಸ್ಟ್ 31ರಂದು ವಿಧಾನಸೌಧದಲ್ಲಿರುವ ಗಾಂಧಿ ಪ್ರತಿಮೆಯಿಂದ ರಾಜಭವನದವರೆಗೆ ಜಾಥಾ ನಡೆಸಲಾಗುವುದೆಂದು ಡಿಸಿಎಂ ಶಿವಕುಮಾರ್ ಹೇಳಿದರು.

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಡಿಕೆ ಶಿವಕುಮಾರ್ ಮತ್ತೊಮ್ಮೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಯನ್ನು ತರಾಟೆಗೆ ತೆಗೆದುಕೊಂಡು, ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ತಾನು ಸಹಿಯೇ ಮಾಡಿಲ್ಲ, ಹತ್ತು ವರ್ಷಗಳ ಹಿಂದೆಯೇ ಬೇಲ್ ತೆಗೆದುಕೊಂಡಿದ್ದೇನೆ ಎನ್ನುತ್ತಾರೆ, ಅವರು ಸಹಿ ಮಾಡಿಲ್ಲ ಅಂತಾದರೆ ಅದು ಫೋರ್ಜರಿಯಾಗಿರುತ್ತದೆ, ತನ್ನ ಸಹಿಯ ಫೋರ್ಜರಿಯಾದರೂ ಕುಮಾರಸ್ವಾಮಿ ಇನ್ನೂ ಯಾಕೆ ಒಂದೇ ಒಂದು ದೂರು ದಾಖಲಿಸಿಲ್ಲ ಎಂದು ಪ್ರಶ್ನಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಜೈಲಲ್ಲಿರುವ ದರ್ಶನ್ ಗೆ ಶಿವಕುಮಾರ್ ಸಹಾಯ ಮಾಡುವುದಾಗಿ ಹೇಳಿದ್ದರು, ಇದು ಸಹಾಯದ ಸ್ಯಾಂಪಲ್? ಅರ್ ಅಶೋಕ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More