AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧ್ರುವನಾರಾಯಣ ವಯಸ್ಸಲ್ಲಿ ಕಿರಿಯರಾಗಿದ್ದರೂ ನನ್ನ ಉತ್ತಮ ಸ್ನೇಹಿತ ಮತ್ತು ಪ್ರಾಮಾಣಿಕ ನಾಯಕರಾಗಿದ್ದರು: ಬಿಎಸ್ ಯಡಿಯೂರಪ್ಪ

ಧ್ರುವನಾರಾಯಣ ವಯಸ್ಸಲ್ಲಿ ಕಿರಿಯರಾಗಿದ್ದರೂ ನನ್ನ ಉತ್ತಮ ಸ್ನೇಹಿತ ಮತ್ತು ಪ್ರಾಮಾಣಿಕ ನಾಯಕರಾಗಿದ್ದರು: ಬಿಎಸ್ ಯಡಿಯೂರಪ್ಪ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on:Mar 11, 2023 | 2:37 PM

Share

ಬೆಳಗ್ಗೆಯೇ ಕುಟುಂಬಕ್ಕೆ ಶೋಕ ಸಂದೇಶ ಕಳಿಸಿದ್ದೇನೆ, ದೇವರು ಮೃತರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಕುಟುಂಬಕ್ಕೆ ನೀಡಲಿ ಎಂದು ಯಡಿಯೂರಪ್ಪ ಹೇಳಿದರು.

ರಾಯಚೂರು: ಶನಿವಾರ ಬೆಳಗ್ಗೆ ತೀವ್ರಸ್ವರೂಪದ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ ಮಾಜಿ ಸಂಸದ ಆರ್ ಧ್ರುವನಾರಾಯಣ (R Dhruvanarayana) ಅಜಾತಶತ್ರುವಾಗಿದ್ದರೆನ್ನುವುದು ನಿರ್ವಿವಾದಿತ. ಬಿಜೆಪಿಯ ಹಿರಿಯ ಮುಖಂಡ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ಇಂದು ರಾಯಚೂರಲ್ಲಿ ಕಾಂಗ್ರೆಸ್ ನಾಯಕನ ಸಾವಿಗೆ ಶೋಕ ವ್ಯಕ್ತ ಪಡಿಸಿದರು. ತನ್ನ ಉತ್ತಮ ಸ್ನೇಹಿತರಾಗಿದ್ದ ಧ್ರುವನಾರಾಯಣ ಒಬ್ಬ ಪ್ರಾಮಾಣಿಕ ಮತ್ತು ಪ್ರಭಾವಿ ನಾಯಕರಾಗಿದ್ದರು (influential leader) ಎಂದು ಬಿಎಸ್ ವೈ ಹೇಳಿದರು. ಬೆಳಗ್ಗೆಯೇ ಕುಟುಂಬಕ್ಕೆ ಶೋಕ ಸಂದೇಶ ಕಳಿಸಿದ್ದೇನೆ, ದೇವರು ಮೃತರ ಆತ್ಮಕ್ಕೆ ಶಾಂತಿ ನೀಡಲಿ ಮತ್ತು ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಕುಟುಂಬಕ್ಕೆ ನೀಡಲಿ ಎಂದು ಯಡಿಯೂರಪ್ಪ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 11, 2023 02:37 PM
Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.