BSY eyes Lingayat votes: ಕಲ್ಯಾಣ ಕರ್ನಾಟಕ ಭಾಗದಲ್ಲಿ ಈಗಲೂ ಬಿಎಸ್ ಯಡಿಯೂರಪ್ಪ ಭಾರೀ ಜನಪ್ರಿಯ ಬಿಜೆಪಿ ನಾಯಕ

ಅರುಣ್​ ಕುಮಾರ್​ ಬೆಳ್ಳಿ

Updated on: Mar 07, 2023 | 3:31 PM

ಸಹಸ್ರಾರು ಸಂಖ್ಯೆಯಲ್ಲಿ ಜನ ರೋಡ್ ಶೋನಲ್ಲಿ ನೆರೆದಿರುವುದು ಅವರ ಜನಪ್ರಿಯತೆಗೆ ಸಾಕ್ಷಿ. ಈ ಭಾಗದಲ್ಲಿ ಲಂಬಾಣಿ ಸಮುದಾಯದವರು ಸಹ ಆಪಾರ ಸಂಖ್ಯೆಯಲ್ಲಿದ್ದು ಅವರನ್ನು ಸಹ ವಿಡಿಯೋದಲ್ಲಿ ನೋಡಬಹುದು.

ಕಲಬುರಗಿ: ರಾಜ್ಯ ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪನವರು (BS Yediyurappa) ಚುನಾವಣಾ ರಾಜಕೀಯದಿಂದ (electoral politics) ದೂರವಾದರೂ ಜನಪ್ರಿಯತೆ ಮಾತ್ರ ಕಿಂಚಿತ್ತೂ ಕಡಮೆಯಾಗಿಲ್ಲ ಮಾರಾಯ್ರೇ. ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ (Kalyana Karnataka region) ಲಿಂಗಾಯತರು ಆಧಿಕ ಮತ್ತು ನಿರ್ಣಾಯಕ ಮತದಾರರಾಗಿರುವುದರಿಂದ ಅವರು ಈ ಪ್ರದೇಶ ಮೇಲೆ ಗಮನ ಕೇಂದ್ರೀಕರಿಸಿರುವುದು ಸತ್ಯ. ಜಿಲ್ಲೆಯ ಸಿಮೆಂಟ್ ಖನಿಜವೆನಿಸಿಕೊಂಡಿರುವ ಶಹಾಬಾದ್ ಪಟ್ಟಣದಲ್ಲಿ ಯಡಿಯೂರಪ್ಪ ಇಂದು ರೋಡ್ ಶೋ ನಡೆಸಿದರು. ಸಹಸ್ರಾರು ಸಂಖ್ಯೆಯಲ್ಲಿ ಜನ ರೋಡ್ ಶೋನಲ್ಲಿ ನೆರೆದಿರುವುದು ಅವರ ಜನಪ್ರಿಯತೆಗೆ ಸಾಕ್ಷಿ. ಈ ಭಾಗದಲ್ಲಿ ಲಂಬಾಣಿ ಸಮುದಾಯದವರು ಸಹ ಆಪಾರ ಸಂಖ್ಯೆಯಲ್ಲಿದ್ದು ಅವರನ್ನು ಸಹ ವಿಡಿಯೋದಲ್ಲಿ ನೋಡಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 07, 2023 02:03 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.