FIR ದಾಖಲಾಗಿದ್ದರೂ ತಲೆ ಕೆಡಿಸಿಕೊಳ್ಳದೆ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿಎಂ
ಒಂದೆಡೆ ಸಿಎಂ ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗಿದೆ. ಆದರೂ ತಲೆ ಕೆಡಿಸಿಕೊಳ್ಳದೆ ಸಿದ್ದರಾಮಯ್ಯ ಅವರು ಸುದೀರ್ಘ 8 ವರೆ ಗಂಟೆಗಳ ಕಾಲ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದಾರೆ. ಮೈಸೂರು ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಇಂದು ನಡೆದ ಸಭೆಯಲ್ಲಿ 28 ಇಲಾಖೆಗಳ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.
ಮೈಸೂರು, ಸೆ.27: ಒಂದೆಡೆ ಸಿಎಂ ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗಿದೆ. ಆದರೂ ತಲೆ ಕೆಡಿಸಿಕೊಳ್ಳದೆ ಸಿದ್ದರಾಮಯ್ಯ ಅವರು ಸುದೀರ್ಘ 8 ವರೆ ಗಂಟೆಗಳ ಕಾಲ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದಾರೆ. ಮೈಸೂರು ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಇಂದು ನಡೆದ ಸಭೆಯಲ್ಲಿ ‘ನೀರಾವರಿ. ಕೃಷಿ, ತೋಟಗಾರಿಕೆ, ಪ್ರವಾಸೋದ್ಯಮ, ಅಬಕಾರಿ, ಲೋಕೋಪಯೋಗಿ, ಕಾವೇರಿ ನೀರಾವರಿ ನಿಗಮ, ಅರಣ್ಯ ಇಲಾಖೆ, ಕಂದಾಯ ಸೇರಿ 28 ಇಲಾಖೆಗಳ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಯಾವುದೇ ಟೆನ್ಷನ್ ಇಲ್ಲದೆ ಸಭೆಯನ್ನ ನಡೆಸಿದ್ದಾರೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
