Loading video

ನೆಹರೂ ಸರ್ಕಾರ ನಟ ದೇವ್ ಆನಂದ್, ಗಾಯಕ ಕಿಶೋರ್​ ಕುಮಾರ್​ಗೆ ನಿಷೇಧ ಹೇರಿತ್ತು; ರಾಜ್ಯಸಭೆಯಲ್ಲಿ ಮೋದಿ ಟೀಕೆ

|

Updated on: Feb 06, 2025 | 5:30 PM

‘ಸಂವಿಧಾನವನ್ನು ಹತ್ತಿಕ್ಕುವ’ ಬಗ್ಗೆ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷದ ವಿರುದ್ಧ ಕಟುವಾದ ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ದಂತಕಥೆಯಾಗಿರುವ ಬಾಲಿವುಡ್ ನಟ ದೇವ್ ಆನಂದ್ ಸೇರಿದಂತೆ ಕಲಾವಿದರು ಕಾಂಗ್ರೆಸ್ ಪಕ್ಷದ ಹಿತಾಸಕ್ತಿಗಳೊಂದಿಗೆ ಹೊಂದಿಕೆಯಾಗದ ಕಾರಣ ಅದರ ಪರಿಣಾಮಗಳನ್ನು ಎದುರಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಕವಿ ಮಜ್ರೂಹ್ ಸುಲ್ತಾನ್ಪುರಿ ಮತ್ತು ನಟ ಬಲರಾಜ್ ಸಾಹ್ನಿ ಅವರ ಬಂಧನಗಳು ಮತ್ತು ತುರ್ತು ಪರಿಸ್ಥಿತಿಯ ಸಮಯದಲ್ಲಿ ದೂರದರ್ಶನದಲ್ಲಿ ದೇವ್ ಆನಂದ್ ಅವರ ಚಲನಚಿತ್ರಗಳ ಮೇಲಿನ ನಿಷೇಧವನ್ನು ಉಲ್ಲೇಖಿಸಿ ಕಾಂಗ್ರೆಸ್ ಅನ್ನು ವಾಕ್ ಸ್ವಾತಂತ್ರ್ಯದ ಮೇಲೆ ದಾಳಿ ಮಾಡಲು ಪ್ರಯತ್ನಿಸಿದರು ಎಂದಿದ್ದಾರೆ.

ನವದೆಹಲಿ: ‘ಸಂವಿಧಾನವನ್ನು ಹತ್ತಿಕ್ಕುವ’ ಬಗ್ಗೆ ಕಾಂಗ್ರೆಸ್ ವಿರುದ್ಧದ ವಾಗ್ದಾಳಿಯಲ್ಲಿ ದೇವ್ ಆನಂದ್ ಮತ್ತು ಕಿಶೋರ್ ಕುಮಾರ್ ಅವರನ್ನು ಪ್ರಧಾನಿ ಮೋದಿ ನೆನಪಿಸಿಕೊಂಡಿದ್ದಾರೆ. ರಾಜ್ಯಸಭಾ ಅಧಿವೇಶನದಲ್ಲಿ ಮಾಡಿದ ಭಾಷಣದ ವೇಳೆ ಕಾಂಗ್ರೆಸ್ ಪಕ್ಷವನ್ನು ಟೀಕಿಸಿರುವ ಪ್ರಧಾನಿ ನರೇಂದ್ರ ಮೋದಿ, ನೆಹರೂ ನೇತೃತ್ವದ ಕಾಂಗ್ರೆಸ್ ಸರ್ಕಾರ ತೆಗೆದುಕೊಂಡ ನಿರ್ಧಾರಗಳ ಬಗ್ಗೆ ಮಾತನಾಡಿದ್ದಾರೆ. ತುರ್ತು ಪರಿಸ್ಥಿತಿಯನ್ನು ಟೀಕಿಸಿದ್ದಕ್ಕೆ ಬಾಲಿವುಡ್ ಹಿರಿಯ ನಟ ದೇವ್ ಆನಂದ್ ಅವರ ಚಲನಚಿತ್ರಗಳನ್ನು ನಿಷೇಧಿಸಲಾಗಿತ್ತು. ಆಗಿನ ಖ್ಯಾತ ಗಾಯಕ ಕಿಶೋರ್ ಕುಮಾರ್ ಕಾಂಗ್ರೆಸ್ ಪರವಾಗಿ ಹಾಡಲು ನಿರಾಕರಿಸಿದರು. ಇದರ ಪರಿಣಾಮವಾಗಿ, ಕಿಶೋರ್ ಕುಮಾರ್ ಅವರ ಎಲ್ಲಾ ಹಾಡುಗಳನ್ನು ಆಕಾಶವಾಣಿಯಲ್ಲಿ ನಿಷೇಧಿಸಲಾಯಿತು. ತುರ್ತು ಪರಿಸ್ಥಿತಿಯ ದಿನಗಳನ್ನು ನಾನು ಮರೆಯಲು ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಹಾಗೇ, ಜವಹರಲಾಲ್ ನೆಹರೂ ಪ್ರಧಾನಿಯಾಗಿದ್ದ ಅವಧಿಯಲ್ಲಿ ಮುಂಬೈನಲ್ಲಿ ಕಾರ್ಮಿಕರ ಮುಷ್ಕರ ನಡೆಯಿತು. ಆ ಮುಷ್ಕರದ ಸಮಯದಲ್ಲಿ ಪ್ರಸಿದ್ಧ ಕವಿ ಮಜ್ರೂಹ್ ಸುಲ್ತಾನಪುರಿ ಒಂದು ಕವಿತೆಯನ್ನು ವಾಚಿಸಿದರು. ಇದರ ನಂತರ ಅವರನ್ನು ಜೈಲಿಗೆ ಹಾಕಲಾಯಿತು. ಆ ಸಮಯದಲ್ಲಿ ಪ್ರತಿಭಟನಾ ಪ್ರದರ್ಶನದಲ್ಲಿ ಭಾಗವಹಿಸಿದ್ದಕ್ಕಾಗಿ ಪ್ರಸಿದ್ಧ ನಟ ಬಲರಾಜ್ ಸಾಹ್ನಿಯನ್ನೂ ಜೈಲಿಗೆ ಹಾಕಲಾಯಿತು. ಲತಾ ಮಂಗೇಶ್ಕರ್ ಅವರ ಸಹೋದರ ಹೃದಯನಾಥ್ ಮಂಗೇಶ್ಕರ್ ಅವರು ವೀರ ಸಾವರ್ಕರ್ ಕುರಿತಾದ ಒಂದು ಕವಿತೆ ಬರೆದಿದ್ದರು, ಅದನ್ನು ಆಕಾಶವಾಣಿಯಲ್ಲಿ ಹಾಡಲು ಬಯಸಿದ್ದರು. ಆದರೆ ಅವರನ್ನು ಆಕಾಶವಾಣಿಯಿಂದ ಜೀವಿತಾವಧಿಯವರೆಗೆ ನಿಷೇಧಿಸಲಾಯಿತು ಎಂದಿದ್ದಾರೆ.

 

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Feb 06, 2025 05:30 PM