ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!

ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
| Updated By: ಗಣಪತಿ ಶರ್ಮ

Updated on: Oct 22, 2024 | 8:56 AM

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ಕರ್ನಾಟಕದ ಅನೇಕ ಕಡೆಗಳಲ್ಲಿ ಸುರಿದ ಭಾರಿ ಮಳೆ ಅನೇಕ ಅವಾಂತರಗಳನ್ನು ಸೃಷ್ಟಿಸಿದೆ. ಬೆಂಗಳೂರಿನಲ್ಲಂತೂ ರಸ್ತೆಗಳೇ ನದಿಗಳಂತಾಗಿದ್ದವು. ಇದೀಗ ದೇವನಹಳ್ಳಿ ತಾಲೂಕಿನ ನಾಗರ್ಜುನಾ ಕಾಲೇಜು ಬಳಿ ಕಾಲುವೆಯೊಂದರ ನೀರಿನಲ್ಲಿ ಕಾರುಗಳು ಕೊಚ್ಚಿಕೊಂಡು ಬಂದಿವೆ.

ದೇವನಹಳ್ಳಿ, ಅಕ್ಟೋಬರ್ 22: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ಚಿಕ್ಕಬಳ್ಳಾಪುರ ಸುತ್ತಮುತ್ತ ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ದೇವನಹಳ್ಳಿ ತಾಲೂಕಿನ ನಾಗರ್ಜುನಾ ಕಾಲೇಜು ಬಳಿ ಮಳೆ ನೀರಿನ ರಭಸಕ್ಕೆ ಎರಡು ಕಾರುಗಳು ಕಾಲುವೆಯಲ್ಲಿ ಕೊಚ್ಚಿಕೊಂಡು ಬಂದಿವೆ. ಸೋಮವಾರ ರಾತ್ರಿ ಕಾಲುವೆ ನೀರಿನಲ್ಲಿ 2 ಕಾರುಗಳು ಕೊಚ್ಚಿಕೊಂಡು ಬಂದಿವೆ. ಕಾಲುವೆಯಲ್ಲಿ ಮಾರುತಿ ಆಸ್ಟರ್ ಕಾರು ಸಂಪೂರ್ಣ ಮುಳುಗಡೆಯಾಗಿದ್ದರೆ, ಮತ್ತೊಂದು ಕಾರು ಕಾಲುವೆ ದಡದಲ್ಲಿ ಕಂಡುಬಂದಿದಿದೆ.

ಹುರಳಗುರ್ಕಿ ಗ್ರಾಮದ 6 ಜನರು ಕಾರಿನಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದದಾಗ ಮಳೆ ನೀರಿನ ರಭಸಕ್ಕೆ ಕಾರು ಏಕಾಏಕಿ ಕೊಚ್ಚಿಹೋಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ 6 ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಧಾರಾಕಾರ ಮಳೆಯಿಂದ ರಸ್ತೆ ತುಂಬಾ ಮಳೆ ನೀರು ಹರಿಯುತ್ತಿತ್ತು ಎನ್ನಲಾಗಿದೆ. ಈ ಬಗ್ಗೆ ಕಾರಿನಲ್ಲಿದ್ದವರು, ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು ಎಂಬುದೂ ವಿಡಿಯೋದಲ್ಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow us
ಈ ರಾಶಿಯ ಮಹಿಳೆಯರು ಇಂದು ಹೂಡಿಕೆ ಮಾಡಿದರೆ ಒಳ್ಳೆ ಲಾಭ ಬರುವುದು
ಈ ರಾಶಿಯ ಮಹಿಳೆಯರು ಇಂದು ಹೂಡಿಕೆ ಮಾಡಿದರೆ ಒಳ್ಳೆ ಲಾಭ ಬರುವುದು
ತನ್ನ ತಲೆಗಿಂತ 2 ಪಟ್ಟು ದೊಡ್ಡ ಮೊಟ್ಟೆಯನ್ನು ನುಂಗಿದ ಹಾವಿನ ಮರಿ!
ತನ್ನ ತಲೆಗಿಂತ 2 ಪಟ್ಟು ದೊಡ್ಡ ಮೊಟ್ಟೆಯನ್ನು ನುಂಗಿದ ಹಾವಿನ ಮರಿ!
ಯೋಗೇಶ್ವರ್ ಅವರನ್ನು ಕಡೆಗಣಿಸುವ ಉದ್ದೇಶ ಖಂಡಿತ ನಮಗಿರಲಿಲ್ಲ: ನಿಖಿಲ್
ಯೋಗೇಶ್ವರ್ ಅವರನ್ನು ಕಡೆಗಣಿಸುವ ಉದ್ದೇಶ ಖಂಡಿತ ನಮಗಿರಲಿಲ್ಲ: ನಿಖಿಲ್
ಗಾಜಾದಲ್ಲಿ ಜೀವ ಉಳಿಸಿಕೊಳ್ಳಲು ತಂಗಿಯನ್ನು ಹೊತ್ತು 2 ಕಿ.ಮೀ ನಡೆದ ಬಾಲಕಿ
ಗಾಜಾದಲ್ಲಿ ಜೀವ ಉಳಿಸಿಕೊಳ್ಳಲು ತಂಗಿಯನ್ನು ಹೊತ್ತು 2 ಕಿ.ಮೀ ನಡೆದ ಬಾಲಕಿ
ಜಮೀರ್ ಅಹ್ಮದ್ ವಿರುದ್ಧ ಪ್ರಾಸಿಕ್ಯೂಷನ್​​​​ಗೆ ಅನುಮತಿ ಕೋರಿದ ಅಬ್ರಹಾಂ
ಜಮೀರ್ ಅಹ್ಮದ್ ವಿರುದ್ಧ ಪ್ರಾಸಿಕ್ಯೂಷನ್​​​​ಗೆ ಅನುಮತಿ ಕೋರಿದ ಅಬ್ರಹಾಂ
ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳ ದುರ್ಬಳಕೆ ಹೆಚ್ಚುತ್ತಿದೆ!
ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳ ದುರ್ಬಳಕೆ ಹೆಚ್ಚುತ್ತಿದೆ!
ಕೆಲಸ ಹೋಯಿತೆಂದು 12ನೇ ಮಹಡಿಯಿಂದ ಹಾರಲು ಯತ್ನಿಸಿದ ಯುವಕ; ಆಮೇಲೇನಾಯ್ತು?
ಕೆಲಸ ಹೋಯಿತೆಂದು 12ನೇ ಮಹಡಿಯಿಂದ ಹಾರಲು ಯತ್ನಿಸಿದ ಯುವಕ; ಆಮೇಲೇನಾಯ್ತು?
ಒಂದೇ ಆಧಾರ್ ಕಾರ್ಡ್​ನಲ್ಲಿ ಮೂವರ ಪ್ರಯಾಣ: ಟಿಸಿ ಕೈಗೆ ಸಿಕ್ಕಿಬಿದ್ದರು
ಒಂದೇ ಆಧಾರ್ ಕಾರ್ಡ್​ನಲ್ಲಿ ಮೂವರ ಪ್ರಯಾಣ: ಟಿಸಿ ಕೈಗೆ ಸಿಕ್ಕಿಬಿದ್ದರು
ಟಾಯ್ಲೆಟ್ ಬಳಸುವುದು ಹೇಗೆ? ಹನುಮಂತನಿಗೆ ತೋರಿಸಿಕೊಟ್ಟ ಧನರಾಜ್
ಟಾಯ್ಲೆಟ್ ಬಳಸುವುದು ಹೇಗೆ? ಹನುಮಂತನಿಗೆ ತೋರಿಸಿಕೊಟ್ಟ ಧನರಾಜ್
ಅಭ್ಯರ್ಥಿಯ ನಿರ್ಣಯ ತೆಗೆದುಕೊಳ್ಳುವ ಅಧಿಕಾರ ಕುಮಾರಸ್ವಾಮಿಗಿದೆ: ಆರ್ ಅಶೋಕ
ಅಭ್ಯರ್ಥಿಯ ನಿರ್ಣಯ ತೆಗೆದುಕೊಳ್ಳುವ ಅಧಿಕಾರ ಕುಮಾರಸ್ವಾಮಿಗಿದೆ: ಆರ್ ಅಶೋಕ