ಬಗೆಹರಿಸದಿದ್ರೆ ಕುಟುಂಬ ಸಮೇತ ಆತ್ಮಹತ್ಯೆ: ಸಚಿವರ ಮುಂದೆ ವಿಷದ ಬಾಟ್ಲು ಹಿಡಿದು ನಿಂತ ವ್ಯಕ್ತಿ
ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿಯಲ್ಲಿ 20 ಗುಂಟೆ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಂದ ಕಿರುಕುಳ ಆರೋಪಿಸಿ ರೈತ ಆಂಜಿನಪ್ಪ ಸಚಿವ ಕೆ.ಹೆಚ್. ಮುನಿಯಪ್ಪ ಎದುರು ವಿಷ ಕುಡಿಯುವುದಾಗಿ ಬೆದರಿಸಿದ್ದಾರೆ. ಅಂಬೇಡ್ಕರ್ ಜಯಂತಿ ಸಭೆಯಲ್ಲಿ ವಿಷದ ಬಾಟಲ್ ತಂದಿದ್ದ ರೈತ, ವ್ಯಾಜ್ಯ ಬಗೆಹರಿಸದಿದ್ದರೆ ಕುಟುಂಬ ಸಮೇತ ಸಾಮೂಹಿಕ ಆತ್ಮಹತ್ಯೆ ಎಚ್ಚರಿಕೆ ನೀಡಿದ್ದಾರೆ.
ದೇವನಹಳ್ಳಿ, ಏಪ್ರಿಲ್ 02: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಜಿಲ್ಲಾಡಳಿತ ಭವನದಲ್ಲಿ ಸಚಿವ ಕೆ.ಹೆಚ್ ಮುನಿಯಪ್ಪ ನೇತೃತ್ವದಲ್ಲಿ ನಡೆದ ಡಾ. ಬಿಆರ್ ಅಂಬೇಡ್ಕರ್ ಮತ್ತು ಬಾಬು ಜಗಜೀವನ್ ರಾಂ ಜಯಂತಿ ಆಚರಣೆಯ ಪೂರ್ವಭಾವಿ ಸಭೆಯಲ್ಲಿ ಮಾತಿನ ಜಟಾಪಟಿಯೇ ನಡೆಯಿತು. ಇದೇ ವೇಳೆ ಸಚಿವರ ಎದುರೇ ವಿಷ ಕುಡಿಯುವುದಾಗಿ ರೈತರೊಬ್ಬರು ಹೇಳಿದ್ದಾರೆ. ದೇವನಹಳ್ಳಿಯ ಮುದಗುರ್ಕಿ ಗ್ರಾಮದ ನಿವಾಸಿ ಆಂಜಿನಪ್ಪ ಸಭೆಗೆ ವಿಷದ ಬಾಟಲ್ ತಂದಿದ್ದರು. 20 ಗುಂಟೆ ಜಮೀನು ವ್ಯಾಜ್ಯ ವಿಚಾರಕ್ಕೆ ಅಧಿಕಾರಿಗಳು ಕಿರುಕುಳ ನೀಡುತ್ತಿರುವ ಆರೋಪ ಮಾಡಿದ್ದಾರೆ. ಅಂಬೇಡ್ಕರ್ ಜಯಂತಿ ಒಳಗಾಗಿ ವ್ಯಾಜ್ಯ ಬಗೆ ಹರಿಸದಿದ್ದರೆ ಕುಟುಂಬ ಸಮೇತ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ವೇಳೆ ಪೊಲೀಸರು ವಿಷದ ಬಾಟಲ್ ಕಿತ್ತುಕೊಂಡು ಬುದ್ದಿವಾದ ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
