ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ: 8 ಖಾಸಗಿ ಸ್ಲೀಪರ್ ಕೋಚ್ ಬಸ್​ಗಳ ಪಾರ್ಟಿಶನ್ ಡೋರ್​​ ತೆರವು

Edited By:

Updated on: Apr 21, 2026 | 12:40 PM

ಪದೇಪದೇ ಸ್ಲೀಪರ್ ಕೋಚ್ ಬಸ್ ಅಪಘಾತಗಳ ಹಿನ್ನೆಲೆಯಲ್ಲಿ ದೇವನಹಳ್ಳಿ ಆರ್​ಟಿಒ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಎಂಟು ಖಾಸಗಿ ಸ್ಲೀಪರ್ ಕೋಚ್ ಬಸ್​ಗಳ ಪಾರ್ಟಿಶನ್ ಡೋರ್​ಗಳನ್ನು ತೆರವುಗೊಳಿಸಲಾಗಿದೆ. ರಾಣಿ ಕ್ರಾಸ್ ಬಳಿ ಬಸ್​ಗಳನ್ನು ನಿಲ್ಲಿಸಿ ಈ ಕಾರ್ಯ ನಡೆಸಲಾಗಿದ್ದು, ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.

ದೇವನಹಳ್ಳಿ, ಏಪ್ರಿಲ್​​ 21: ಪದೇಪದೆ ಸ್ಲೀಪರ್​ ಕೋಚ್​ ಬಸ್​ಗಳ ಅಪಘಾತ ಹಿನ್ನೆಲೆ ಬೆಳ್ಳಂಬೆಳಗ್ಗೆ ದೇವನಹಳ್ಳಿ ಆರ್​ಟಿಒ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಖಾಸಗಿ ಸ್ಲೀಪರ್ ಕೋಚ್ ಬಸ್​ಗಳ ಪಾರ್ಟಿಶನ್ ಡೋರ್​​ ತೆರವು ಮಾಡಿದ್ದಾರೆ. ದೇವನಹಳ್ಳಿ ಪಟ್ಟಣದ ರಾಣಿ ಕ್ರಾಸ್​ ಬಳಿ ಬಸ್​ಗಳನ್ನು ನಿಲ್ಲಿಸಿ ತೆರವು ಕಾರ್ಯ ನಡೆಸಲಾಗಿದೆ. ಹೈದರಾಬಾದ್​​ನಿಂದ ಬೆಂಗಳೂರಿಗೆ ಬರುತ್ತಿದ್ದ ಸ್ಲೀಪರ್ ಕೋಚ್ ಬಸ್​​ಗಳನ್ನು ನಡೆದಿರುವ ಅಧಿಕಾರಿಗಳು, ಬಸ್ ಡ್ರೈವರ್ ಮತ್ತು ಪ್ಯಾಸೆಂಜರ್​​ಗಳ ನಡುವಿನ ಡೋರ್ ತೆರವು ಮಾಡಿದ್ದಾರೆ.8 ಬಸ್​ಗಳ ಡೋರ್​ ಬಿಚ್ಚಿಸಿ ಸೀಜ್​​ ಮಾಡಲಾಗಿದೆ. ದೇವನಹಳ್ಳಿ ಆರ್​ಟಿಒ ಸುಧೀರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Apr 21, 2026 12:38 PM
Follow Us
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More