ಏರ್ಪೋಟ್ ರಸ್ತೆಯಲ್ಲಿ ಬಲಿಗಾಗಿ ಕಾಯುತ್ತಿದೆ ಟೋಲ್ ಬೂತ್: ಯಾವುದೇ ಕ್ಷಣದಲ್ಲಾದರೂ ಕುಸಿಯುವ ಭೀತಿ

Edited By:

Updated on: Jan 15, 2026 | 12:34 PM

ದೇವನಹಳ್ಳಿ ಬಳಿ NH 44 ರ ಬೆಂಗಳೂರು-ಹೈದರಾಬಾದ್ ಹೆದ್ದಾರಿಯಲ್ಲಿರುವ ಶಿಥಿಲಗೊಂಡ ಟೋಲ್ ಬೂತ್ ಅತ್ಯಂತ ಅಪಾಯಕಾರಿಯಾಗಿದೆ. ಹಿಂದಿನ ಅಪಘಾತ ಮತ್ತು ದೂರುಗಳ ಹೊರತಾಗಿಯೂ, ಅಧಿಕಾರಿಗಳು ಇದನ್ನು ತೆರವುಗೊಳಿಸಲು ನಿರ್ಲಕ್ಷಿಸಿದ್ದಾರೆ. ಗೋಡೆಗಳು ಬಿರುಕು ಬಿಟ್ಟಿದ್ದು, ಯಾವುದೇ ಕ್ಷಣದಲ್ಲಿ ಕುಸಿಯುವ ಭೀತಿಯಿದೆ. ಮೂರು ವರ್ಷಗಳ ಹಿಂದೆ ಟೋಲ್ ಸಂಗ್ರಹ ನಿಲ್ಲಿಸಿದ್ದರೂ, ಈ ಜೀವಕ್ಕೆ ಅಪಾಯ ತರುವ ರಚನೆ ಸವಾರರಿಗೆ ದೊಡ್ಡ ಆತಂಕ ಮೂಡಿಸಿದೆ. ಕೂಡಲೇ ತೆರವುಗೊಳಿಸಬೇಕಿದೆ.

ಬೆಂಗಳೂರು , ಜ.15: ಬೆಂಗಳೂರು–ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44 ರಲ್ಲಿನ ದೇವನಹಳ್ಳಿ ಹೊರವಲಯದ ಟೋಲ್ ಪ್ಲಾಜಾ ಬಳಿ ಈ ಹಿಂದೆ ಟ್ರಾನ್ಸ್ ಇಂಡಿಯಾ ಸಂಸ್ಥೆಯ ಸ್ಲೀಪರ್ ಕೋಚ್ ಬಸ್ ಅತಿವೇಗದಿಂದ ಬೂತ್‌ಗೆ ಡಿಕ್ಕಿ ಹೊಡೆದ ಘಟನೆಯೊಂದು ನಡೆದಿತ್ತು. ಈ ಅಪಘಾತದ ನಂತರವೂ ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ. ಇದೀಗ ಏರ್ಪೋಟ್ ರಸ್ತೆಯಲ್ಲಿರುವ ಈ ಟೋಲ್ ಬೂತ್ ಮತ್ತೊಂದು ಅವಘಡಕ್ಕೆ ಸಿದ್ಧತೆ ಮಾಡಿಕೊಂಡಿರುವಂತೆ ಕಾಣುತ್ತಿದೆ. ಈ ಟೋಲ್ ಪ್ಲಾಜಾ ಬೂತ್ ಯಾವುದೆ ಸಮಯದಲ್ಲ ಕುಸಿದು ಬೀಳುವ ಸಾಧ್ಯತೆ ಇದೆ. ಸ್ವಲ್ಪ ಯಾಮಾರಿದರು ವಾಹನ ಸವಾರರ ಸ್ಥಿತಿ ಅದೋಗತಿ ಆಗುವುದು ಖಂಡಿತ. ಬೂತ್ ಗೋಡೆಗಳು ಸಂಪೂರ್ಣವಾಗಿ ಬಿರುಕು ಬಿಟ್ಟಿದೆ. ಹಲವು ಭಾರಿ ಟೋಲ್ ಬೂತ್ ತೆರವಿಗೆ ದೂರು ನೀಡಿದರು ಯಾರು ಕ್ರಮ ಕೈಗೊಂಡಿಲ್ಲ. ಮೂರು ವರ್ಷಗಳಿಂದ ಟೋಲ್ ವಸೂಲಿಯನ್ನು ನಿಲ್ಲಿಸಿರುವ ಈ ಟೂಲ್​​ನ್ನು ತೆರೆವು ಮಾಡದೆ ಅಲ್ಲಿಯೇ ಬಿಟ್ಟಿದ್ದಾರೆ. ಪ್ರತಿದಿನ ಹೈದರಾಬಾದ್ ಚಿಕ್ಕಬಳ್ಳಾಪುರ ಕಡೆಯಿಂದ ಸಾವಿರಾರು ವಾಹನಗಳು ವೇಗವಾಗಿ ಬರುವ ಕಾರಣ ಈ ಟೋಲ್​​ ಇರುವುದು ತಿಳಿಯುವುದಿಲ್ಲ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Follow Us
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More