ಯಾರು ಧರ್ಮ ಹಿಡಿದು ನಡೆಕೋತೀರಿ ಅವರನ್ನು ಅಂಗೈಯಲ್ಲಿ ಹಿಡಿದು ಲಿಂಗದಲ್ಲಿ ಸಂರಕ್ಷಣೆ ಮಾಡುತ್ತೇನೆ: ಮಲ್ಲಯ್ಯರ ಕಾರ್ಣಿಕ

Edited By:

Updated on: Oct 05, 2025 | 6:46 PM

ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣದ ಆರಾಧ್ಯ ದೈವ ರಾವುತರಾಯ ಮಲ್ಲಯ್ಯರ ಜಾತ್ರಾ ಮಹೋತ್ಸವ ಸಡಗರ ಸಂಭ್ರಮದಿಂದ ನಡೆಯಿತು. ನಿನ್ನೆಯಿಂದ ಸತತ ಐದು ದಿನಗಳ ಕಾಲ ನಡೆಯೋ ಜಾತ್ರೆಗೆ ಸುತ್ತಮುತ್ತಲ ಜಿಲ್ಲೆಗಳ ಹಾಗೂ ನೆರೆ ರಾಜ್ಯಗಳ ಜಾತ್ರಾ ಭಕ್ತರು ಆಗಮಿಸಿ ದರ್ಶನ ಮಾಡುತ್ತಾರೆ. ಜಾತ್ರೆಯ ಅಂಗವಾಗಿ ರಾವುತರಾಯ ಮಲ್ಲಯ್ಯನ ಮೂರ್ತಿಯನ್ನು ಬಂಡಿಯಲ್ಲಿಟ್ಟು ಮೆರವಣಿಗೆ ಮಾಡಲಾಯಿತು. ಭಕ್ತರ ಸಾಗರ ಅಪಾರ ಪ್ರಮಾಣದ ಭಂಡಾರವನ್ನು ಎರಚೋ ಮೂಲಕ ಭಕ್ತಿ ಪರಾಕಾಷ್ಠೆ ಮೆರದರು. ಇನ್ನು ಜಾತ್ರೆಯಲ್ಲಿ ದೇವಸ್ಥಾನದ ಪೂಜಾರಿ ನುಡಿಯೋ ಕಾರ್ಣಿಕ ಭವಿಷ್ಯ ಎಂದೂ ಸುಳ್ಳಾಗಿಲ್ಲಾ ಎಂಬ ನಂಬಿಕೆ ಭಕ್ತರಲ್ಲಿದೆ. ನಿನ್ನೆ ಬಂಡಿ ಮೆರವಣಿಗೆ ಬಳಿಕ ಕಾರ್ಣಿಕ ಭವಿಷ್ಯ ನುಡಿಯಲಾಯಿತು.

ವಿಜಯಪುರ, (ಅಕ್ಟೋಬರ್ 05): ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣದ ಆರಾಧ್ಯ ದೈವ ರಾವುತರಾಯ ಮಲ್ಲಯ್ಯರ ಜಾತ್ರಾ ಮಹೋತ್ಸವ ಸಡಗರ ಸಂಭ್ರಮದಿಂದ ನಡೆಯಿತು. ನಿನ್ನೆಯಿಂದ ಸತತ ಐದು ದಿನಗಳ ಕಾಲ ನಡೆಯೋ ಜಾತ್ರೆಗೆ ಸುತ್ತಮುತ್ತಲ ಜಿಲ್ಲೆಗಳ ಹಾಗೂ ನೆರೆ ರಾಜ್ಯಗಳ ಜಾತ್ರಾ ಭಕ್ತರು ಆಗಮಿಸಿ ದರ್ಶನ ಮಾಡುತ್ತಾರೆ. ಜಾತ್ರೆಯ ಅಂಗವಾಗಿ ರಾವುತರಾಯ ಮಲ್ಲಯ್ಯನ ಮೂರ್ತಿಯನ್ನು ಬಂಡಿಯಲ್ಲಿಟ್ಟು ಮೆರವಣಿಗೆ ಮಾಡಲಾಯಿತು. ಭಕ್ತರ ಸಾಗರ ಅಪಾರ ಪ್ರಮಾಣದ ಭಂಡಾರವನ್ನು ಎರಚೋ ಮೂಲಕ ಭಕ್ತಿ ಪರಾಕಾಷ್ಠೆ ಮೆರದರು. ಇನ್ನು ಜಾತ್ರೆಯಲ್ಲಿ ದೇವಸ್ಥಾನದ ಪೂಜಾರಿ ನುಡಿಯೋ ಕಾರ್ಣಿಕ ಭವಿಷ್ಯ ಎಂದೂ ಸುಳ್ಳಾಗಿಲ್ಲಾ ಎಂಬ ನಂಬಿಕೆ ಭಕ್ತರಲ್ಲಿದೆ. ನಿನ್ನೆ ಬಂಡಿ ಮೆರವಣಿಗೆ ಬಳಿಕ ಕಾರ್ಣಿಕ ಭವಿಷ್ಯ ನುಡಿಯಲಾಯಿತು. ಗೋದಿ ಕಡಲಿ, ಅಗಸಿ, ಜೋಳದ ಬೆನ್ನು ಹತ್ತಿತು. ಯಾರು ಧರ್ಮ ಹಿಡಿದು ನಡೆಕೋತೀರಿ ಅವರನ್ನು ಅಂಗೈಯಲ್ಲಿ ಹಿಡಿದು ಲಿಂಗದಲ್ಲಿ ಸಂರಕ್ಷಣೆ ಮಾಡುತ್ತೇನೆ. ಹಸ್ತ ಮಳೆ, ಸ್ವಾತಿ ಮಳೆ, ಚಿತ್ತಿ ಮಳೆ ಒಂದೊಂದು ಸರುವ್ ಕೊಡತೇನಿ ಎಂದು ಹೇಳೇನಿ. ಬಿಳಿ ಕಾಳ ಕೆಂಪ ಕಾಳ ಸಮಾ ಮಾಡುದ್ರಾಗ ಬಿಳಿ ಕಾಳ ಮೇಲಾಯಿತು. ಬಿಳಿ ಕಾಳ ಬೆಳಕಾಯಿತು. ಧರ್ಮ ಸಣ್ಣಾಗೋ ಕಾಲ ಬಂತು. ನಮ್ಮಂತೆ ಯಾರು ನಡೀತೀರಿ ನಿಮ್ಮಂತೆ ನಾ ಇರ್ತೀನಿ. ನಾ ಅಂದ ಮಗನೀಗಿ ಎಳು ಪಾತಾಳದಾಗ ಹಾಕಿ ತುಳಿತೀನಿ. ಹತ್ತು ಮಂದಿ ಕೂಡಿ ನನ್ನ ತಳಕ್ಕೆ ಹಚ್ಚಿದ್ದ ಬಂಗಾರದ ಹೊಗೆ ಹರಿತೈತಿ ಎಂದು ಕಾರ್ಣಿಕ ನುಡಿದಿದ್ದಾರೆ. ಕಾರ್ಣಿಕದ ಅರ್ಥವನ್ನು ನೋಡಲಾಗಿ ಬಿಳಿ ಬಣ್ಣದ ಧವಸ ಧಾನ್ಯಗಳ ಫಸಲು ಉತ್ತಮವಾಗಿ ಬರುತ್ತವೆ. ಎಲ್ಲರೂ ಧರ್ಮ ಹಿಡಿದುಕೊಂಡು ಹೋಗಬೇಕಿದೆ. ಧರ್ಮದಿಂದ ಹೋಗುವವರ ರಕ್ಷಣೆಯಾಗುತ್ತದೆ ಎಂಬುದಾಗಿದೆ ಅರ್ಥೈಹಿಸಲಾಗಿದೆ.

Follow Us
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More