ಶಾರ್ಟ್ ಸರ್ಕ್ಯೂಟ್ಗೆ ಸಿಲಿಂಡರ್ ಸ್ಫೋಟ; 21 ಲಕ್ಷ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲು!
ಮಂಡ್ಯದ ಅಶೋಕ ನಗರದಲ್ಲಿರುವ ಟೀ ಡೇ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಅಗ್ನಿ ಅವಘಡ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಅಂಗಡಿಯಲ್ಲಿದ್ದ 21 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ತಿಮ್ಮೇಗೌಡರ ಒಡೆತನದ ಈ ಅಂಗಡಿಯ ಪಕ್ಕದ ಟೈಲ್ಸ್ ಅಂಗಡಿಗೂ ಬೆಂಕಿ ತಗುಲಿತ್ತು. ಘಟನೆಯಿಂದ ವ್ಯಾಪಾರಿಯ ಕನಸುಗಳು ಭಗ್ನಗೊಂಡಿವೆ.
ಮಂಡ್ಯ, ಸೆಪ್ಟೆಂಬರ್ 12: ಮಂಡ್ಯದ ಅಶೋಕ ನಗರದಲ್ಲಿರುವ ಟೀ ಡೇ ಎಂಬ ಟೀ ಅಂಗಡಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ಕಾಣಿಸಿಕೊಂಡು ಸಿಲಿಂಡರ್ ಸ್ಫೋಟಗೊಂಡ ಪರಿಣಾಮ, ಸುಮಾರು 21 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಅಂಗಡಿಯ ಮಾಲೀಕ ತಿಮ್ಮೇಗೌಡರಿಗೆ ಸೇರಿದ ಈ ಟೀ ಡೇ ಶಾಪ್ ಎರಡುವರೆ ವರ್ಷಗಳಿಂದ ಯಶಸ್ವಿಯಾಗಿ ನಡೆಯುತ್ತಿತ್ತು.
ಅಂಗಡಿಯಲ್ಲಿದ್ದ ಫ್ರೀಜರ್ಗಳು, ಫ್ರಿಡ್ಜ್, ಯುಪಿಎಸ್ ಸೇರಿದಂತೆ ಎಲ್ಲಾ ಉಪಕರಣಗಳು ಬೆಂಕಿಗೆ ಆಹುತಿಯಾಗಿವೆ. ಅಗ್ನಿ ಅವಘಡವು ಅಂದಾಜು ಬೆಳಗ್ಗೆ 4:30ರ ಸುಮಾರಿಗೆ ಸಂಭವಿಸಿದ್ದು, ಅಕ್ಕಪಕ್ಕದ ಟೈಲ್ಸ್ ಅಂಗಡಿಗೂ ಸಹ ಬೆಂಕಿ ವ್ಯಾಪಿಸಿತ್ತು. ಘಟನೆ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಚರಣೆ ನಡೆಸಿದ್ದಾರೆ. ಘಟನೆಯ ಬಗ್ಗೆ ಮಾತನಾಡಿದ ಸತ್ಯಮೇವ, ತಮ್ಮ ಹೂಡಿಕೆ ಸಂಪೂರ್ಣ ನಷ್ಟವಾಗಿದೆ ಎಂದು ತಿಳಿಸಿದ್ದಾರೆ. ಉದ್ಯಮದ ಮೇಲೆ ಕಟ್ಟಿಕೊಂಡಿದ್ದ ಬಹಳಷ್ಟು ಕನಸುಗಳು ಭಗ್ನವಾಗಿವೆ ಎಂದು ಅವರು ನೋವು ವ್ಯಕ್ತಪಡಿಸಿದ್ದಾರೆ. ಈ ಘಟನೆಯಿಂದ ವ್ಯಾಪಾರಿಗೆ ಭಾರಿ ಆರ್ಥಿಕ ನಷ್ಟ ಉಂಟಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
