AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಸೊಕ್ಕು ಮುರಿಯುತ್ತೇನೆ ಅಂದಿದ್ದ ದೇವೇಗೌಡ ಮುರಿದ್ರಾ? ರಾಜಣ್ಣ

ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಸೊಕ್ಕು ಮುರಿಯುತ್ತೇನೆ ಅಂದಿದ್ದ ದೇವೇಗೌಡ ಮುರಿದ್ರಾ? ರಾಜಣ್ಣ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Nov 26, 2024 | 4:46 PM

Share

ಹಾಸನದಲ್ಲಿ ಕಾಂಗ್ರೆಸ್ ಸಮಾವೇಶ ಆಯೋಜಿಸಲು ಸರ್ಕಾರ ನಿರ್ಧರಿಸುವುದು ಸತ್ಯ, ಮೊದಲು ಮೈಸೂರಲ್ಲಿ ಆಯೋಜಿಸಬೇಕೆಂಬ ಯೋಚನೆ ಇತ್ತು, ಕಾರಣಾಂತರಗಳಿಂದ ಅದನ್ನು ರದ್ದು ಮಾಡಿ ಹಾಸನದಲ್ಲಿ ನಡೆಸಲು ತೀರ್ಮಾನಿಸಲಾಗಿದೆ, ಡಿಸೆಂಬರ್ 5 ರಂದು ಸಮಾವೇಶ ನಡೆಸಲಾಗುವುದು ಎಂದು ರಾಜಣ್ಣ ಹೇಳಿದರು.

ದೆಹಲಿ: ಪಕ್ಷ ಟಾಸ್ಕ್ ನೀಡಿದರೆ ಜೆಡಿಎಸ್ ಎಲ್ಲ ಶಾಸಕರನ್ನು ಕಾಂಗ್ರೆಸ್ ಗೆ ತರುತ್ತೇನೆ ಅಂತ ಸಿಪಿ ಯೋಗೇಶ್ವರ್ ಹೇಳಿರುವುದಕ್ಕೆ ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿದ ಸಚಿವ ಕೆಎನ್ ರಾಜಣ್ಣ, ಅವರ ಮನಸಲ್ಲಿ ಏನಿದೆಯೋ ಗೊತ್ತಿಲ್ಲ, ವಿಧಾನಸಭಾ ಚುನಾವಣೆಯಲ್ಲಿ ದೇವೇಗೌಡರು ಸಿದ್ದರಾಮಯ್ಯ ಸೊಕ್ಕು ಮುರಿಯುತ್ತೇನೆ, ಸರ್ಕಾರವನ್ನು ಬೀಳಿಸುತ್ತೇನೆ ಅಂದಿದ್ದರು, ಅದನ್ನವರು ಮಾಡಿದ್ರಾ? ಹಾಗೆಯೇ ಯೋಗೇಶ್ವರ್ ಜೆಡಿಎಸ್ ಶಾಸಕರನ್ನು ಕರೆತರುವ ಬಗ್ಗೆ ಮಾತಾಡಿರುತ್ತಾರೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಅಪೆಕ್ಸ್ ಬ್ಯಾಂಕ್ ಹಗರಣ: ಕೆಎನ್ ರಾಜಣ್ಣ ವಿರುದ್ಧ ರಾಜ್ಯಪಾಲರ ಮೊರೆ ಹೋದ ದಿನೇಶ್ ಕಲ್ಲಹಳ್ಳಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.