ಇಳಿ ವಯಸ್ಸಿನಲ್ಲೂ ಪ್ರಚಾರಕ್ಕೆ ಬರಲಿರುವ ದೇವೇಗೌಡ ಎಲ್ಲರಿಗೂ ಪ್ರೇರಣೆಯಾಗಿದ್ದಾರೆ: ವಿಜಯೇಂದ್ರ
ಒಳ ಮೀಸಲಾತಿ ಮತ್ತು ಕಾಂತ್ರಾಜ್ ಅಯೋಗದ ವರದಿಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಾಮಾಣಿಕ ಮನೋಭಾವ ಹೊಂದಿದ್ದರೆ ಬಹಳ ಹಿಂದೆಯೇ ಅದನ್ನು ಅನುಷ್ಠಾನಗೊಳಿಸುತ್ತಿದ್ದರು, ಆದರೆ ಒಳ ಮೀಸಲಾತಿ ಅವರಿಗೆ ಒಂದು ರಾಜಕೀಯ ವಸ್ತುವಾಗಿದೆ, ಉಪ ಚುನಾವಣೆ ಹಿನ್ನೆಲೆಯಲ್ಲಿ ಅದನ್ನು ಮುನ್ನೆಲೆಗೆ ತಂದಿದ್ದಾರೆ ಎಂದು ವಿಜಯೇಂದ್ರ ಹೇಳಿದರು.
ಬೆಂಗಳೂರು: ರಾಜ್ಯ ಬಿಜೆಪಿ ಆಯೋಜಿಸಿದ್ದ ಐಕ್ಯತಾ ಓಟದಲ್ಲಿ ಭಾಗವಹಿಸಿದ್ದ ಬಿವೈ ವಿಜಯೇಂದ್ರ, ಇಳಿವಯಸ್ಸಿನಲ್ಲೂ ಹೆಚ್ ಡಿ ದೇವೇಗೌಡರು ಚನ್ನಪಟ್ಟಣದಲ್ಲಿ ನಿಖಿಲ್ ಪರ ಪ್ರಚಾರ ಮಾಡುವ ವಿಷಯ ಕಾಂಗ್ರೆಸ್ ಪಾಳೆಯದಲ್ಲಿ ಆತಂಕ ಮೂಡಿಸಿದೆ ಎಂದರು. ಅವರಲ್ಲಿರುವ ಉತ್ಸಾಹ ಮತ್ತು ಹುಮ್ಮಸ್ಸು ಎಲ್ಲರಿಗೂ ಪ್ರೇರಣೆಯಾಗಿದೆ , ನಿಖಿಲ್ ಎನ್ಡಿಎ ಅಭ್ಯರ್ಥಿಯಾಗಿದ್ದು ಅವರನ್ನು ಗೆಲ್ಲಿಸುವ ಜವಾಬ್ದಾರಿ ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತನ ಮೇಲಿದೆ ಎಂದು ವಿಜಯೇಂದ್ರ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಬಿಜೆಪಿಯ ಶಾಲು ಹೊದೆಸಿ ಸನ್ಮಾನಿಸುವಾಗ ಪರಸ್ಪರ ಜೋಕ್ ಕಟ್ ಮಾಡಿ ನಕ್ಕ ನಿಖಿಲ್-ವಿಜಯೇಂದ್ರ
Published on: Oct 29, 2024 11:20 AM
Latest Videos

ಅನಾರೋಗ್ಯದಲ್ಲಿ ಕೈ ಹಿಡಿದ RCBಗೆ ಕಪ್ ಗೆಲ್ಲಿಸಿ ಕೊಡುವುದೇ ಗುರಿ..!

ಸಾಲ್ಟ್ ಬ್ಯಾಟಿಂಗ್ ನೋಡಿದ ಯುವತಿಯರು ಉಪ್ಪಿಗಿಂತ ರುಚಿಯಿಲ್ಲ ಅಂದರು!

ಏರ್ಪೋರ್ಟ್ನಲ್ಲಿ ಯುವತಿಯ ಮೇಕಪ್ ತೆಗೆಸಿದ ಏರ್ಪೋರ್ಟ್ ಸಿಬ್ಬಂದಿ

VIDEO: ಇದೆಂಥ ಕೀಳುಮಟ್ಟದ ವರ್ತನೆ... ವಿರಾಟ್ ಕೊಹ್ಲಿ ವಿರುದ್ಧ ಆಕ್ರೋಶ
