AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಳಿ ವಯಸ್ಸಿನಲ್ಲೂ ಪ್ರಚಾರಕ್ಕೆ ಬರಲಿರುವ ದೇವೇಗೌಡ ಎಲ್ಲರಿಗೂ ಪ್ರೇರಣೆಯಾಗಿದ್ದಾರೆ: ವಿಜಯೇಂದ್ರ

ಇಳಿ ವಯಸ್ಸಿನಲ್ಲೂ ಪ್ರಚಾರಕ್ಕೆ ಬರಲಿರುವ ದೇವೇಗೌಡ ಎಲ್ಲರಿಗೂ ಪ್ರೇರಣೆಯಾಗಿದ್ದಾರೆ: ವಿಜಯೇಂದ್ರ

ಅರುಣ್​ ಕುಮಾರ್​ ಬೆಳ್ಳಿ
|

Updated on:Oct 29, 2024 | 11:24 AM

ಒಳ ಮೀಸಲಾತಿ ಮತ್ತು ಕಾಂತ್​ರಾಜ್ ಅಯೋಗದ ವರದಿಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರಾಮಾಣಿಕ ಮನೋಭಾವ ಹೊಂದಿದ್ದರೆ ಬಹಳ ಹಿಂದೆಯೇ ಅದನ್ನು ಅನುಷ್ಠಾನಗೊಳಿಸುತ್ತಿದ್ದರು, ಆದರೆ ಒಳ ಮೀಸಲಾತಿ ಅವರಿಗೆ ಒಂದು ರಾಜಕೀಯ ವಸ್ತುವಾಗಿದೆ, ಉಪ ಚುನಾವಣೆ ಹಿನ್ನೆಲೆಯಲ್ಲಿ ಅದನ್ನು ಮುನ್ನೆಲೆಗೆ ತಂದಿದ್ದಾರೆ ಎಂದು ವಿಜಯೇಂದ್ರ ಹೇಳಿದರು.

ಬೆಂಗಳೂರು: ರಾಜ್ಯ ಬಿಜೆಪಿ ಆಯೋಜಿಸಿದ್ದ ಐಕ್ಯತಾ ಓಟದಲ್ಲಿ ಭಾಗವಹಿಸಿದ್ದ ಬಿವೈ ವಿಜಯೇಂದ್ರ, ಇಳಿವಯಸ್ಸಿನಲ್ಲೂ ಹೆಚ್ ಡಿ ದೇವೇಗೌಡರು ಚನ್ನಪಟ್ಟಣದಲ್ಲಿ ನಿಖಿಲ್ ಪರ ಪ್ರಚಾರ ಮಾಡುವ ವಿಷಯ ಕಾಂಗ್ರೆಸ್ ಪಾಳೆಯದಲ್ಲಿ ಆತಂಕ ಮೂಡಿಸಿದೆ ಎಂದರು. ಅವರಲ್ಲಿರುವ ಉತ್ಸಾಹ ಮತ್ತು ಹುಮ್ಮಸ್ಸು ಎಲ್ಲರಿಗೂ ಪ್ರೇರಣೆಯಾಗಿದೆ , ನಿಖಿಲ್ ಎನ್​ಡಿಎ ಅಭ್ಯರ್ಥಿಯಾಗಿದ್ದು ಅವರನ್ನು ಗೆಲ್ಲಿಸುವ ಜವಾಬ್ದಾರಿ ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತನ ಮೇಲಿದೆ ಎಂದು ವಿಜಯೇಂದ್ರ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಬಿಜೆಪಿಯ ಶಾಲು ಹೊದೆಸಿ ಸನ್ಮಾನಿಸುವಾಗ ಪರಸ್ಪರ ಜೋಕ್ ಕಟ್ ಮಾಡಿ ನಕ್ಕ ನಿಖಿಲ್-ವಿಜಯೇಂದ್ರ

Published on: Oct 29, 2024 11:20 AM