ದೇವೇಗೌಡರ ಅನಾರೋಗ್ಯದ ಕಾರಣ ಬೇರೆ ಬೇರೆ ಪಕ್ಷಗಳ ನಾಯಕರು ಅವರನ್ನು ಭೇಟಿಯಾಗುತ್ತಿದ್ದಾರೆ: ಕುಮಾರಸ್ವಾಮಿ

Edited By: ಅರುಣ್​ ಕುಮಾರ್​ ಬೆಳ್ಳಿ

Updated on: Sep 21, 2022 | 2:42 PM

ಲಬುರಗಿಯಲ್ಲಿ ಬುಧವಾರ ಮಾತಾಡಿದ ಹೆಚ್ ಡಿ ಕುಮಾರಸ್ವಾಮಿ ಅವರು, ದೇವೇಗೌಡರಿಗೆ ಆರೋಗ್ಯ ಸರಿಯಿರಲಿಲ್ಲ, ಈಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಆವರ ಆರೋಗ್ಯದ ಬಗ್ಗೆ ವಿಚಾರಿಸಲು ಬೇರೆ ಬೇರೆ ಪಕ್ಷಗಳ ಧುರೀಣರು ಭೇಟಿ ನೀಡುತ್ತಿದ್ದಾರೆ ಎಂದು ಹೇಳಿದರು.

ಕಲಬುರಗಿ: ವಿವಿಧ ಪಕ್ಷಗಳ ನಾಯಕರು ಮಾಜಿ ಮುಖ್ಯಮಂತ್ರಿ ಮತ್ತು ಜೆಡಿ (ಎಸ್) ಪಕ್ಷದ ಪಿತಾಮಹ ಹೆಚ್ ಡಿ ದೇವೇಗೌಡರನ್ನು (HD Devegowda) ಭೇಟಿಯಾಗುತ್ತಿರುವುದು ರಾಜಕೀಯ ವಲಯಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮೊದಲು ಸಿದ್ದರಾಮಯ್ಯನವರು (Siddaramaiah) ಗೌಡರನ್ನು ಭೇಟಿಯಾದ ಬಳಿಕ ಬಿಎಸ್ ಯಡಿಯೂರಪ್ಪ (BS Yediyurappa) ಸಹ ಪದ್ಮನಾಭನಗರಕ್ಕೆ ತೆರಳಿ ಅವರನ್ನು ಭೇಟಿಯಾದರು, ಈ ಕುರಿತು ಕಲಬುರಗಿಯಲ್ಲಿ ಬುಧವಾರ ಮಾತಾಡಿದ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಅವರು, ದೇವೇಗೌಡರಿಗೆ ಆರೋಗ್ಯ ಸರಿಯಿರಲಿಲ್ಲ, ಈಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಆವರ ಆರೋಗ್ಯದ ಬಗ್ಗೆ ವಿಚಾರಿಸಲು ಬೇರೆ ಬೇರೆ ಪಕ್ಷಗಳ ಧುರೀಣರು ಭೇಟಿ ನೀಡುತ್ತಿದ್ದಾರೆ ಎಂದು ಹೇಳಿದರು.

Follow Us
Web contact

TV9 Kannada

Read More