ಬಳ್ಳಾರಿ ಜೈಲಲ್ಲಿ ದರ್ಶನ್ ಭೇಟಿ ಮಾಡಿದ ‘ಡೆವಿಲ್’ ನಿರ್ದೇಶಕ; ಬ್ಯಾಗ್ ತುಂಬ ತಂದಿದ್ದೇನು?

| Updated By: ಮದನ್​ ಕುಮಾರ್​

Updated on: Sep 26, 2024 | 6:09 PM

ದರ್ಶನ್​ ಜೈಲಿಗೆ ಹೋಗುವುದಕ್ಕೂ ಮುನ್ನ ‘ಡೆವಿಲ್​’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದರು. ಆದರೆ ಅವರ ಮೇಲೆ ಕೊಲೆ ಆರೋಪ ಬಂದಿದ್ದರಿಂದ ಸಿನಿಮಾದ ಕೆಲಸಗಳು ಅರ್ಧಕ್ಕೆ ನಿಂತು ಹೋದವು. ಇಂದು (ಸೆಪ್ಟೆಂಬರ್​ 26) ‘ಡೆವಿಲ್’ ಸಿನಿಮಾದ ನಿರ್ದೇಶಕ ಪ್ರಕಾಶ್ ವೀರ್​ ಅವರು ಬಳ್ಳಾರಿ ಜೈಲಿಗೆ ಹೋಗಿ ದರ್ಶನ್​ ಭೇಟಿ ಮಾಡಿದ್ದಾರೆ.

‘ಡೆವಿಲ್​’ ಚಿತ್ರದ ನಿರ್ದೇಶಕ ಪ್ರಕಾಶ್ ವೀರ್​ ಅವರು ಬಳ್ಳಾರಿ ಜೈಲಿನಲ್ಲಿ ದರ್ಶನ್​ ಅವರನ್ನು ಭೇಟಿಯಾಗಿದ್ದಾರೆ. ದರ್ಶನ್​ಗಾಗಿ ಅವರು ಎರಡು ಬ್ಯಾಗ್​ ತುಂಬ ಬಾಳೆಕಾಯಿ ಚಿಪ್ಸ್, ಬಿಸ್ಕೆಟ್​ ಮುಂತಾದ ತಿನಿಸುಗಳನ್ನು ತಂದಿದ್ದಾರೆ. ಎಲ್ಲವನ್ನೂ ಪೊಲೀಸರು ತಪಾಸಣೆ ಮಾಡಿ ನಂತರ ಒಳಗೆ ಕಳಿಸಿದ್ದಾರೆ. ಸಿನಿಮಾಗೆ ಸಂಬಂಧಿಸಿದಂತೆ ಕೆಲವು ಮುಖ್ಯ ವಿಚಾರಗಳನ್ನು ಕೂಡ ದರ್ಶನ್ ಜೊತೆ ಪ್ರಕಾಶ್ ಮಾತನಾಡಿ ಬಂದಿದ್ದಾರೆ. ಶೀಘ್ರದಲ್ಲೇ ದರ್ಶನ್​ಗೆ ಜಾಮೀನು ಸಿಗಬಹುದು ಎಂಬ ನಿರೀಕ್ಷೆ ಅವರ ಆಪ್ತವಲಯಕ್ಕೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 5:55 pm, Thu, 26 September 24

Follow us on