AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಬ್ಬಗಳ ಮಾಸ ಶ್ರಾವಣದ ಮೊದಲ ಶನಿವಾರ ಚಿತ್ರದುರ್ಗದ ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆಗೆ ಸಾಲುಗಟ್ಟಿದ ಭಕ್ತರು

ಹಬ್ಬಗಳ ಮಾಸ ಶ್ರಾವಣದ ಮೊದಲ ಶನಿವಾರ ಚಿತ್ರದುರ್ಗದ ಆಂಜನೇಯ ದೇವಸ್ಥಾನದಲ್ಲಿ ವಿಶೇಷ ಪೂಜೆಗೆ ಸಾಲುಗಟ್ಟಿದ ಭಕ್ತರು

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Aug 19, 2023 | 11:04 AM

Share

ನಮಗೆಲ್ಲ ಗೊತ್ತಿರುವ ಶ್ರಾವಣ ಮಾಸದ ಸೋಮವಾರ ಮತ್ತು ಶನಿವಾರಗಳನ್ನು ಬಹು ವಿಶಿಷ್ಟ ಎಂದು ಪರಿಗಣಿಸಲಾಗುತ್ತದೆ. ಉತ್ತರ ಕರ್ನಾಟಕದ ಕಲಬುರಗಿಯಲ್ಲಿ ಶ್ರಾವಣ ಮಾಸದ ಸೋಮವಾರಗಳಂದು ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳು ನಡೆಯುತ್ತವೆ.

ಚಿತ್ರದುರ್ಗ: ಶ್ರಾವಣ ಮಾಸ (month of Shravana) ಬಂತೆಂದರೆ ಹಬ್ಬಗಳ ಪರ್ವ ಶುರುವಾದ ಹಾಗೆ. ಈ ಮಂಗಳಕರ ತಿಂಗಳಲ್ಲೇ ನಾಗರ ಪಂಚಮಿ (Nag Panchami), ವರಮಹಾಲಕ್ಷ್ಮೀ ಹಬ್ಬ, ರಾಖಿ ಹುಣ್ಣಿಮೆ, ಪೊಲಾಲ ಅಮವಾಸ್ಯೆ ಮೊದಲಾದ ಹಬ್ಬಗಳು ಆಚರಿಸಲ್ಪಡುತ್ತವೆ. ನಮಗೆಲ್ಲ ಗೊತ್ತಿರುವ ಶ್ರಾವಣ ಮಾಸದ ಸೋಮವಾರ ಮತ್ತು ಶನಿವಾರಗಳನ್ನು ಬಹು ವಿಶಿಷ್ಟ ಎಂದು ಪರಿಗಣಿಸಲಾಗುತ್ತದೆ. ಉತ್ತರ ಕರ್ನಾಟಕದ ಕಲಬುರಗಿಯಲ್ಲಿ ಶ್ರಾವಣ ಮಾಸದ ಸೋಮವಾರಗಳಂದು ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳು ನಡೆಯುತ್ತವೆ. ಕೋಟೆನಾಡು ಚಿತ್ರದುರ್ಗದಲ್ಲಿ (Chitradurga) ಶ್ರಾವಣ ಮಾಸದ ಮೊದಲ ಶನಿವಾರದ ಅಂಗವಾಗಿ ನಗರದ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳು ನಡೆಯುತ್ತಿವೆ. ವಿಡಿಯೋದಲ್ಲಿ ಕಾಣುತ್ತಿರೋದು ದುರ್ಗದ ಒನಕೆ ಓಬವ್ವ ರಸ್ತೆಯಲ್ಲಿರುವ ಆಂಜನೇಯ ದೇವಸ್ಥಾನಕ್ಕೆ (Anjaneya temple) ಬೆಳಗ್ಗೆಯಿಂದಲೇ ಭಕ್ತರು ಸಾಲುಸಾಲಾಗಿ ಆಗಿ ಅಗಮಿಸಿ ಆರಾಧನೆ ಸಲ್ಲಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.