ಶ್ರೀಕೃಷ್ಣ ಜನ್ಮಾಷ್ಟಮಿ: ಇಸ್ಕಾನ್ ಮಂದಿರದಲ್ಲಿ ಪೂಜೆ-ಪ್ರಸಾದ ವ್ಯವಸ್ಥೆ, ಬೆಳಗ್ಗೆಯಿಂದಲೇ ಕಿಕ್ಕಿರಿದ ಭಕ್ತಸಾಗರ

ವರದಿಗಾರರು ಹೇಳುವ ಪ್ರಕಾರ ಬೆಳಗ್ಗೆ 8ರಿಂದ ರಾತ್ರಿ 10ಗಂಟೆವರೆಗೆ ಮಾತ್ರ ಕೃಷ್ಣನ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇಂದು ರಾತ್ರಿ 12 ಗಂಟೆಗೆ ಅರ್ಚಕರು ಮತ್ತೊಮ್ಮೆ ಪಂಚಾಭಿಷೇಕ ನೆರವೇರಿಸಲಿದ್ದಾರೆ. ಮಧ್ಯಾಹ್ನ ನಡೆಯುವ ಮಹಾಮಂಗಳಾರತಿ ಸಮಯದಲ್ಲಿ ಭಕ್ತರ ಸಂಖ್ಯೆ ಮತ್ತಷ್ಟು ಹೆಚ್ಚಲಿದೆ ರಾಜ್ಯಪಾಲರು ಸೇರಿದಂತೆ ಹಲವಾರು ರಾಜಕಾರಣಿಗಳು ಆಗಮಿಸುವ ನಿರೀಕ್ಷೆ ಇದೆ.

ಶ್ರೀಕೃಷ್ಣ ಜನ್ಮಾಷ್ಟಮಿ: ಇಸ್ಕಾನ್ ಮಂದಿರದಲ್ಲಿ ಪೂಜೆ-ಪ್ರಸಾದ ವ್ಯವಸ್ಥೆ, ಬೆಳಗ್ಗೆಯಿಂದಲೇ ಕಿಕ್ಕಿರಿದ ಭಕ್ತಸಾಗರ
|

Updated on: Sep 07, 2023 | 12:47 PM

ಬೆಂಗಳೂರು: ಶ್ರೀಕೃಷ್ಣ ಜನ್ಮಾಷ್ಟಮಿಯಂದು (Sri Krishna Janmashtami) ನಗರದ ಇಸ್ಕಾನ್ ನಲ್ಲಿ (ISKCON temple) ಪೂಜಾ ಕೈಂಕರ್ಯಗಳಿಗೆ, ಭಜನೆ, ಪ್ರಸಾದಗಳಮನ್ನೊಳಗೊಂಡ ಸಂಭ್ರಮಕ್ಕೆ ಎಣೆಯಿರದು. ಟಿವಿ9 ಕನ್ನಡ ವಾಹಿನಿಯ ಬೆಂಗಳೂರು ವರದಿಗಾರ್ತಿ ನೀಡುವ ಮಾಹಿತಿ ಪ್ರಕಾರ ಬೆಳಗಿನ ಜಾವವೇ ಕೃಷ್ಣನಿಗೆ ಪಂಚಾಭಿಷೇಕ (pancha abhishekam) ಮತ್ತು ವಿಶೇಷ ಪುಷ್ಪಾಭಿಷೇಕ ಮಾಡಲಾಗಿದೆ ಮತ್ತು ಭಕ್ತಾದಿಗಳು ಬೆಳಗ್ಗೆ 5 ಗಂಟೆಯಿಂದಲೇ ಇಲ್ಲಿಗೆ ಬರಲಾರಂಭಿಸಿದ್ದಾರಂತೆ. ಕೃಷ್ಣನಿಗೆ ವಜ್ರ ವೈಢೂರ್ಯಗಳಿಂದ ಅಲಂಕರಿಸಲಾಗಿದೆ. ಗರ್ಭಗುಡಿಯ (sanctorum) ಮುಂದೆ ನಡೆಯುತ್ತಿರುವ ಭಜನೆಯಲ್ಲಿ ಭಕ್ತಾದಿಗಳು ಭಾಗಿಇಯಾಗುತ್ತಿದ್ದಾರೆ. ಅಲ್ಲಿ ಜನ ಭಕ್ತಿಭಾವದಿಂದ ಕೂತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಮಂದಿರಕ್ಕೆ ಆಗಮಿಸುವ ಕೃಷ್ಣಭಕ್ತರಿಗೆ ಯಾವುದೇ ಸಮಸ್ಯೆಯಾಗದಿರಲು ಪೊಲೀಸ್ ಮತ್ತು ವಲಂಟೀರ್ ಗಳನ್ನು ನಿಯೋಜಿಸಲಾಗಿದೆ. ವರದಿಗಾರರು ಹೇಳುವ ಪ್ರಕಾರ ಬೆಳಗ್ಗೆ 8ರಿಂದ ರಾತ್ರಿ 10ಗಂಟೆವರೆಗೆ ಮಾತ್ರ ಕೃಷ್ಣನ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇಂದು ರಾತ್ರಿ 12 ಗಂಟೆಗೆ ಅರ್ಚಕರು ಮತ್ತೊಮ್ಮೆ ಪಂಚಾಭಿಷೇಕ ನೆರವೇರಿಸಲಿದ್ದಾರೆ. ಮಧ್ಯಾಹ್ನ ನಡೆಯುವ ಮಹಾಮಂಗಳಾರತಿ ಸಮಯದಲ್ಲಿ ಭಕ್ತರ ಸಂಖ್ಯೆ ಮತ್ತಷ್ಟು ಹೆಚ್ಚಲಿದೆ ರಾಜ್ಯಪಾಲರು ಸೇರಿದಂತೆ ಹಲವಾರು ರಾಜಕಾರಣಿಗಳು ಆಗಮಿಸುವ ನಿರೀಕ್ಷೆ ಇದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಚಾಮುಂಡೇಶ್ವರಿ ವರ್ಧಂತಿ ಮಹತ್ವವೇನು? ಪ್ರಧಾನ ಅರ್ಚಕರು ವಿವರಿಸಿದ್ದಾರೆ ನೋಡಿ
ಚಾಮುಂಡೇಶ್ವರಿ ವರ್ಧಂತಿ ಮಹತ್ವವೇನು? ಪ್ರಧಾನ ಅರ್ಚಕರು ವಿವರಿಸಿದ್ದಾರೆ ನೋಡಿ
ಜಿಯೋ ಏರ್​ಫೈಬರ್ ಗ್ರಾಹಕರಿಗೆ ಶೇ 30 ಡಿಸ್ಕೌಂಟ್ ಆಫರ್
ಜಿಯೋ ಏರ್​ಫೈಬರ್ ಗ್ರಾಹಕರಿಗೆ ಶೇ 30 ಡಿಸ್ಕೌಂಟ್ ಆಫರ್
ಮೊದಲ ಮಳೆ,ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು
ಮೊದಲ ಮಳೆ,ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು
ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ!
ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ!
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ