ಶ್ರೀಕೃಷ್ಣ ಜನ್ಮಾಷ್ಟಮಿ: ಇಸ್ಕಾನ್ ಮಂದಿರದಲ್ಲಿ ಪೂಜೆ-ಪ್ರಸಾದ ವ್ಯವಸ್ಥೆ, ಬೆಳಗ್ಗೆಯಿಂದಲೇ ಕಿಕ್ಕಿರಿದ ಭಕ್ತಸಾಗರ

ವರದಿಗಾರರು ಹೇಳುವ ಪ್ರಕಾರ ಬೆಳಗ್ಗೆ 8ರಿಂದ ರಾತ್ರಿ 10ಗಂಟೆವರೆಗೆ ಮಾತ್ರ ಕೃಷ್ಣನ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇಂದು ರಾತ್ರಿ 12 ಗಂಟೆಗೆ ಅರ್ಚಕರು ಮತ್ತೊಮ್ಮೆ ಪಂಚಾಭಿಷೇಕ ನೆರವೇರಿಸಲಿದ್ದಾರೆ. ಮಧ್ಯಾಹ್ನ ನಡೆಯುವ ಮಹಾಮಂಗಳಾರತಿ ಸಮಯದಲ್ಲಿ ಭಕ್ತರ ಸಂಖ್ಯೆ ಮತ್ತಷ್ಟು ಹೆಚ್ಚಲಿದೆ ರಾಜ್ಯಪಾಲರು ಸೇರಿದಂತೆ ಹಲವಾರು ರಾಜಕಾರಣಿಗಳು ಆಗಮಿಸುವ ನಿರೀಕ್ಷೆ ಇದೆ.

|

Updated on: Sep 07, 2023 | 12:47 PM

ಬೆಂಗಳೂರು: ಶ್ರೀಕೃಷ್ಣ ಜನ್ಮಾಷ್ಟಮಿಯಂದು (Sri Krishna Janmashtami) ನಗರದ ಇಸ್ಕಾನ್ ನಲ್ಲಿ (ISKCON temple) ಪೂಜಾ ಕೈಂಕರ್ಯಗಳಿಗೆ, ಭಜನೆ, ಪ್ರಸಾದಗಳಮನ್ನೊಳಗೊಂಡ ಸಂಭ್ರಮಕ್ಕೆ ಎಣೆಯಿರದು. ಟಿವಿ9 ಕನ್ನಡ ವಾಹಿನಿಯ ಬೆಂಗಳೂರು ವರದಿಗಾರ್ತಿ ನೀಡುವ ಮಾಹಿತಿ ಪ್ರಕಾರ ಬೆಳಗಿನ ಜಾವವೇ ಕೃಷ್ಣನಿಗೆ ಪಂಚಾಭಿಷೇಕ (pancha abhishekam) ಮತ್ತು ವಿಶೇಷ ಪುಷ್ಪಾಭಿಷೇಕ ಮಾಡಲಾಗಿದೆ ಮತ್ತು ಭಕ್ತಾದಿಗಳು ಬೆಳಗ್ಗೆ 5 ಗಂಟೆಯಿಂದಲೇ ಇಲ್ಲಿಗೆ ಬರಲಾರಂಭಿಸಿದ್ದಾರಂತೆ. ಕೃಷ್ಣನಿಗೆ ವಜ್ರ ವೈಢೂರ್ಯಗಳಿಂದ ಅಲಂಕರಿಸಲಾಗಿದೆ. ಗರ್ಭಗುಡಿಯ (sanctorum) ಮುಂದೆ ನಡೆಯುತ್ತಿರುವ ಭಜನೆಯಲ್ಲಿ ಭಕ್ತಾದಿಗಳು ಭಾಗಿಇಯಾಗುತ್ತಿದ್ದಾರೆ. ಅಲ್ಲಿ ಜನ ಭಕ್ತಿಭಾವದಿಂದ ಕೂತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಮಂದಿರಕ್ಕೆ ಆಗಮಿಸುವ ಕೃಷ್ಣಭಕ್ತರಿಗೆ ಯಾವುದೇ ಸಮಸ್ಯೆಯಾಗದಿರಲು ಪೊಲೀಸ್ ಮತ್ತು ವಲಂಟೀರ್ ಗಳನ್ನು ನಿಯೋಜಿಸಲಾಗಿದೆ. ವರದಿಗಾರರು ಹೇಳುವ ಪ್ರಕಾರ ಬೆಳಗ್ಗೆ 8ರಿಂದ ರಾತ್ರಿ 10ಗಂಟೆವರೆಗೆ ಮಾತ್ರ ಕೃಷ್ಣನ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇಂದು ರಾತ್ರಿ 12 ಗಂಟೆಗೆ ಅರ್ಚಕರು ಮತ್ತೊಮ್ಮೆ ಪಂಚಾಭಿಷೇಕ ನೆರವೇರಿಸಲಿದ್ದಾರೆ. ಮಧ್ಯಾಹ್ನ ನಡೆಯುವ ಮಹಾಮಂಗಳಾರತಿ ಸಮಯದಲ್ಲಿ ಭಕ್ತರ ಸಂಖ್ಯೆ ಮತ್ತಷ್ಟು ಹೆಚ್ಚಲಿದೆ ರಾಜ್ಯಪಾಲರು ಸೇರಿದಂತೆ ಹಲವಾರು ರಾಜಕಾರಣಿಗಳು ಆಗಮಿಸುವ ನಿರೀಕ್ಷೆ ಇದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್
ಬಂದ್ ಆಚರಿಸುವ ಬದಲು ಸರ್ಕಾರದ ಪ್ರಯತ್ನಗಳಿಗೆ ಸಹಕಾರ ನೀಡಲಿ:ಡಿಕೆ ಶಿವಕುಮಾರ್
ಬಂದ್ ಆಚರಿಸುವ ಬದಲು ಸರ್ಕಾರದ ಪ್ರಯತ್ನಗಳಿಗೆ ಸಹಕಾರ ನೀಡಲಿ:ಡಿಕೆ ಶಿವಕುಮಾರ್
ವಿರೋಧ ಪಕ್ಷಗಳ ನಾಯಕರು ನೀರಿನ ಮೇಲೆ ರಾಜಕಾರಣ ಮಾಡುತ್ತಿದ್ದಾರೆ: ಶಿವಕುಮಾರ್
ವಿರೋಧ ಪಕ್ಷಗಳ ನಾಯಕರು ನೀರಿನ ಮೇಲೆ ರಾಜಕಾರಣ ಮಾಡುತ್ತಿದ್ದಾರೆ: ಶಿವಕುಮಾರ್