ಶ್ರೀಕೃಷ್ಣ ಜನ್ಮಾಷ್ಟಮಿ: ಇಸ್ಕಾನ್ ಮಂದಿರದಲ್ಲಿ ಪೂಜೆ-ಪ್ರಸಾದ ವ್ಯವಸ್ಥೆ, ಬೆಳಗ್ಗೆಯಿಂದಲೇ ಕಿಕ್ಕಿರಿದ ಭಕ್ತಸಾಗರ

ವರದಿಗಾರರು ಹೇಳುವ ಪ್ರಕಾರ ಬೆಳಗ್ಗೆ 8ರಿಂದ ರಾತ್ರಿ 10ಗಂಟೆವರೆಗೆ ಮಾತ್ರ ಕೃಷ್ಣನ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇಂದು ರಾತ್ರಿ 12 ಗಂಟೆಗೆ ಅರ್ಚಕರು ಮತ್ತೊಮ್ಮೆ ಪಂಚಾಭಿಷೇಕ ನೆರವೇರಿಸಲಿದ್ದಾರೆ. ಮಧ್ಯಾಹ್ನ ನಡೆಯುವ ಮಹಾಮಂಗಳಾರತಿ ಸಮಯದಲ್ಲಿ ಭಕ್ತರ ಸಂಖ್ಯೆ ಮತ್ತಷ್ಟು ಹೆಚ್ಚಲಿದೆ ರಾಜ್ಯಪಾಲರು ಸೇರಿದಂತೆ ಹಲವಾರು ರಾಜಕಾರಣಿಗಳು ಆಗಮಿಸುವ ನಿರೀಕ್ಷೆ ಇದೆ.

ಶ್ರೀಕೃಷ್ಣ ಜನ್ಮಾಷ್ಟಮಿ: ಇಸ್ಕಾನ್ ಮಂದಿರದಲ್ಲಿ ಪೂಜೆ-ಪ್ರಸಾದ ವ್ಯವಸ್ಥೆ, ಬೆಳಗ್ಗೆಯಿಂದಲೇ ಕಿಕ್ಕಿರಿದ ಭಕ್ತಸಾಗರ
|

Updated on: Sep 07, 2023 | 12:47 PM

ಬೆಂಗಳೂರು: ಶ್ರೀಕೃಷ್ಣ ಜನ್ಮಾಷ್ಟಮಿಯಂದು (Sri Krishna Janmashtami) ನಗರದ ಇಸ್ಕಾನ್ ನಲ್ಲಿ (ISKCON temple) ಪೂಜಾ ಕೈಂಕರ್ಯಗಳಿಗೆ, ಭಜನೆ, ಪ್ರಸಾದಗಳಮನ್ನೊಳಗೊಂಡ ಸಂಭ್ರಮಕ್ಕೆ ಎಣೆಯಿರದು. ಟಿವಿ9 ಕನ್ನಡ ವಾಹಿನಿಯ ಬೆಂಗಳೂರು ವರದಿಗಾರ್ತಿ ನೀಡುವ ಮಾಹಿತಿ ಪ್ರಕಾರ ಬೆಳಗಿನ ಜಾವವೇ ಕೃಷ್ಣನಿಗೆ ಪಂಚಾಭಿಷೇಕ (pancha abhishekam) ಮತ್ತು ವಿಶೇಷ ಪುಷ್ಪಾಭಿಷೇಕ ಮಾಡಲಾಗಿದೆ ಮತ್ತು ಭಕ್ತಾದಿಗಳು ಬೆಳಗ್ಗೆ 5 ಗಂಟೆಯಿಂದಲೇ ಇಲ್ಲಿಗೆ ಬರಲಾರಂಭಿಸಿದ್ದಾರಂತೆ. ಕೃಷ್ಣನಿಗೆ ವಜ್ರ ವೈಢೂರ್ಯಗಳಿಂದ ಅಲಂಕರಿಸಲಾಗಿದೆ. ಗರ್ಭಗುಡಿಯ (sanctorum) ಮುಂದೆ ನಡೆಯುತ್ತಿರುವ ಭಜನೆಯಲ್ಲಿ ಭಕ್ತಾದಿಗಳು ಭಾಗಿಇಯಾಗುತ್ತಿದ್ದಾರೆ. ಅಲ್ಲಿ ಜನ ಭಕ್ತಿಭಾವದಿಂದ ಕೂತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಮಂದಿರಕ್ಕೆ ಆಗಮಿಸುವ ಕೃಷ್ಣಭಕ್ತರಿಗೆ ಯಾವುದೇ ಸಮಸ್ಯೆಯಾಗದಿರಲು ಪೊಲೀಸ್ ಮತ್ತು ವಲಂಟೀರ್ ಗಳನ್ನು ನಿಯೋಜಿಸಲಾಗಿದೆ. ವರದಿಗಾರರು ಹೇಳುವ ಪ್ರಕಾರ ಬೆಳಗ್ಗೆ 8ರಿಂದ ರಾತ್ರಿ 10ಗಂಟೆವರೆಗೆ ಮಾತ್ರ ಕೃಷ್ಣನ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇಂದು ರಾತ್ರಿ 12 ಗಂಟೆಗೆ ಅರ್ಚಕರು ಮತ್ತೊಮ್ಮೆ ಪಂಚಾಭಿಷೇಕ ನೆರವೇರಿಸಲಿದ್ದಾರೆ. ಮಧ್ಯಾಹ್ನ ನಡೆಯುವ ಮಹಾಮಂಗಳಾರತಿ ಸಮಯದಲ್ಲಿ ಭಕ್ತರ ಸಂಖ್ಯೆ ಮತ್ತಷ್ಟು ಹೆಚ್ಚಲಿದೆ ರಾಜ್ಯಪಾಲರು ಸೇರಿದಂತೆ ಹಲವಾರು ರಾಜಕಾರಣಿಗಳು ಆಗಮಿಸುವ ನಿರೀಕ್ಷೆ ಇದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್