AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರಾವಣ ಮಾಸದ ಕೊನೆಯ ಶನಿವಾರ, ಮಾಲೂರಿನ ವೆಂಕಟರಮಣ ದೇವಸ್ಥಾನಕ್ಕೆ ಹರಿದುಬಂದ ಭಕ್ತಸಾಗರ

ಶ್ರಾವಣ ಮಾಸದ ಕೊನೆಯ ಶನಿವಾರ, ಮಾಲೂರಿನ ವೆಂಕಟರಮಣ ದೇವಸ್ಥಾನಕ್ಕೆ ಹರಿದುಬಂದ ಭಕ್ತಸಾಗರ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Aug 31, 2024 | 10:47 AM

Share

ಶ್ರಾವಣ ಮಾಸದಲ್ಲಿ ವೆಂಕಟರಮಣನ ದರ್ಶನ ಪಡೆದು ಪೂಜೆ ಸಲ್ಲಿಸಿದರೆ ಇಷ್ಟಾರ್ಥಗಳು ಈಡೇರುತ್ತವೆ ಎಂಬ ನಂಬಿಕೆ ಇದೆ. ಅದರಲ್ಲೂ ಕೊನೆಯ ಶನಿವಾರದಂದು ಭಕ್ತರು ದಂಡುದಂಡಾಗಿ ದೇವಸ್ಥಾನಕ್ಕೆ ತೆರಳಿ ತಮ್ಮ ಹರಕೆಗಳನ್ನು ದೇವರಿಗೆ ಸಲ್ಲಿಸುತ್ತಾರೆ. ಇದು ಪ್ರತಿ ವರ್ಷ ನಡೆಯುವ ಪದ್ಧತಿ.

ಕೋಲಾರ: ಇವತ್ತು ಶ್ರಾವಣ ಮಾಸದ ಕೊನೆಯ ಶನಿವಾರ. ಜಿಲ್ಲೆಯ ಮಾಲೂರು ತಾಲೂಕಿನಲ್ಲಿರುವ ಚಿಕ್ಕ ತಿರುಪತಿ ಪ್ರಸನ್ನ ವೆಂಕಟರಮಣನ ಸ್ವಾಮಿ ದೇವಾಲಯದಲ್ಲಿ ಬೆಳಗಿನ ಜಾವವೇ ಭಕ್ತಸಾಗರ ಹರಿದು ಬಂದಿತ್ತು. ನಮ್ಮ ಕೋಲಾರ ವರದಿಗಾರ ನೀಡುವ ಮಾಹಿತಿ ಪ್ರಕಾರ ಬೆಳಗಿನ ಜಾವ ನಾಲ್ಕು ಗಂಟೆಯಿಂದಲೇ ಜನ ಸರತಿ ಸಾಲಲ್ಲಿ ಅಗಮಿಸಿ ವೆಂಕಟರಮಣನ ದರ್ಶನ ಪಡೆದು ಕೃತಾರ್ಥರಾದರು. ರಾಜ್ಯದ ಬೇರೆ ಬೇರೆ ಭಾಗಗಳಲ್ಲೂ ಶ್ರಾವಣ ಮಾಸದ ಕೊನೆಯ ಶನಿವಾರವನ್ನು ಭಕ್ತಿ ಶ್ರದ್ಧೆಗಳಿಂದ ಆಚರಿಸಲಾಗುತ್ತಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಶ್ರಾವಣ ಮಾಸ ಆರಂಭವಾಗುತ್ತಿದ್ದಂತೆಯೇ ತರಕಾರಿ, ಹೂ, ಹಣ್ಣುಗಳ ಬೆಲೆ ಏರಿಕೆ; ಇಲ್ಲಿದೆ ದರ ಪಟ್ಟಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.