ವೈಕುಂಠ ಏಕಾದಶಿ: ಮದ್ದೂರಿನ ಉಗ್ರನರಸಿಂಹ ದೇವಸ್ಥಾನ ಭಕ್ತರ ದಂಡು, ದೇವರಿಗೆ ವಿಶೇಷ ಪೂಜೆ

ಅರುಣ್​ ಕುಮಾರ್​ ಬೆಳ್ಳಿ

Updated on: Jan 10, 2025 | 12:02 PM

ಗಮನಿಸಬೇಕಾದ ಅಂಶವೆಂದರೆ ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು, ಅಪರೂಪದ ಸಂದರ್ಭಗಳಲ್ಲಿ ಮಾತ್ರ ಅದು ಸಾಧ್ಯವಾಗುತ್ತದೆ. ವಿಶೇಷ ಸಂದರ್ಭಗಳಲ್ಲಿ ದೇವಸ್ಥಾನಗಳಿಗೆ ಭೇಟಿ ನೀಡುವ ಭಕ್ತರ ಸಂಖ್ಯೆ ಜಾಸ್ತಿ ಇರುತ್ತದೆ. ಹಾಗಾಗಿ ದರ್ಶನ ಪಡೆಯುವ ಜನ ಮುಂದೆ ಸಾಗಿ ಬೇರೆಯವರಿಗೆ ಅವಕಾಶ ಮಾಡಿಕೊಡಬೇಕು. ಮಾಧ್ಯಮದ ಕೆಮೆರಾಗಳನ್ನು ಕಂಡರೆ ಜನ ಬೇಗ ಮುಂದೆ ಸರಿಯುವುದಿಲ್ಲ.

ಮಂಡ್ಯ: ಇವತ್ತು ವೈಕುಂಠ ಏಕಾದಶಿ, ನಾಡಿನ ಜನ ಭಕ್ತಿಭಾವಗಳಿಂದ ವೆಂಕಟೇಶ್ವರನಿಗೆ, ಉಗ್ರ ನರಸಿಂಹನಿಗೆ ಪೂಜೆಗಳನ್ನು ಮಾಡುತ್ತಿದ್ದಾರೆ. ಜಿಲ್ಲೆಯ ಮದ್ದೂರುನಲ್ಲಿರುವ ಉಗ್ರನರಸಿಂಹನ ದೇವಸ್ಥಾನದಲ್ಲಿ ವಿಶೇಷ ಪೂಜೆ ಏರ್ಪಡಿಸಲಾಗಿದೆ. ಉಗ್ರನರಸಿಂಹನಿಗೆ ಬೆಳಗಿನ ಜಾವದಿಂದಲೇ ಅಲಂಕರಿಸುವುದು ಶುರುವಾಗಿದೆಯೆಂದು ದೇವಸ್ಥಾನ ಮಂಡಳಿ ಹೇಳಿದೆ. ಭಕ್ತರು ಸಾಲುಸಾಲಾಗಿ ದೇವಸ್ಥಾನಕ್ಕೆ ಅಗಮಿಸಿ ನರಸಿಂಹನ ದರ್ಶನ ಪಡೆದು ಭಕ್ತಿಯಿಂದ ಕೈಮುಗಿಯುತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: Daily Horoscope: ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ

Published on: Jan 10, 2025 11:57 AM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.