ನಿಯೋಜಿತ ಸಿಎಂ ಡಿಕೆ ಶಿವಕುಮಾರ್ ಭೇಟಿಯಾದ ಡಿಜಿಪಿ ಅಲೋಕ್ ಕುಮಾರ್, ಎಡಿಜಿಪಿ ಡಿ.ರೂಪಾ ಮೌದ್ಗಿಲ್
ಬೆಂಗಳೂರಿನ ಸದಾಶಿವನಗರದಲ್ಲಿರುವ ನಿಯೋಜಿತ ಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಡಿಜಿಪಿ ಅಲೋಕ್ ಕುಮಾರ್, ಎಡಿಜಿಪಿ ಡಿ.ರೂಪಾ ಮೌದ್ಗಿಲ್, ಜಿಬಿಎ ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಮತ್ತು ರಾಜ್ಯ ಗುಪ್ತಚರ ಇಲಾಖೆಯ ಐಜಿಪಿ ಲಾಬೂರಾಮ್ ಈ ವೇಳೆ ಉಪಸ್ಥಿತರಿದ್ದರು.
ಬೆಂಗಳೂರು, ಮೇ 31: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಸದಾಶಿವನಗರದಲ್ಲಿರುವ ನಿವಾಸಕ್ಕೆ ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಡಿಜಿಪಿ ಅಲೋಕ್ ಕುಮಾರ್ ಮತ್ತು ಎಡಿಜಿಪಿ ಡಿ.ರೂಪಾ ಮೌದ್ಗಿಲ್ ಡಿಕೆಶಿ ಅವರನ್ನು ಭೇಟಿಯಾಗಿದ್ದು, ಈ ವೇಳೆ ಜಿಬಿಎ ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಮತ್ತು ರಾಜ್ಯ ಗುಪ್ತಚರ ಇಲಾಖೆಯ ಐಜಿಪಿ ಲಾಬೂರಾಮ್ ಕೂಡ ಉಪಸ್ಥಿತರಿದ್ದರು. ರಾಜ್ಯದ ಕಾನೂನು ಸುವ್ಯವಸ್ಥೆ ಮತ್ತು ಆಡಳಿತಾತ್ಮಕ ವಿಷಯಗಳ ಕುರಿತು ಈ ವೇಳೆ ಚರ್ಚೆ ನಡೆದಿದೆ ಎನ್ನಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
