ತಾನು ನೀಡಿದ ದೂರಿನ ಬಗ್ಗೆ ಡಿಜಿ-ಐಜಿಪಿ ಮತ್ತು ಸಿಓಡಿಗೆ ಮಾಹಿತಿಯೇ ಇಲ್ವಂತೆ: ಸಿಟಿ ರವಿ, ಎಮ್ಮೆಲ್ಸಿ
ಸದನದಲ್ಲಿ ನಡೆಯುವ ಎಲ್ಲ ಘಟನಾವಳಿಗಳು ಸಂವಿಧಾನದ ಪ್ರಕಾರ ಪರಿಷತ್ ನಲ್ಲಿ ಸಭಾಪತಿ ಮತ್ತು ವಿಧಾನಸಭೆಯಲ್ಲಿ ಸಭಾಧ್ಯಕ್ಷರ ಗಮನಕ್ಕೆ ಬರುತ್ತವೆ ಮತ್ತು ಅವರೇ ನಿರ್ಣಯಗಳನ್ನು ತೆಗೆದುಕೊಳ್ಳುತ್ತಾರೆ. ಅದರೆ ಕಾಂಗ್ರೆಸ್, ಸದನದಲ್ಲಿ ನಡೆದ ವಿದ್ಯಮಾನಗಳನ್ನು ಸಭಾಪತಿಗಳಿಂದ ವಿಚಾರಣೆ ಮಾಡಿಸುವ ಬದಲು ಪೊಲೀಸ್ಗೆ ದೂರು ನೀಡುವ ಮೂಲಕ ಕಾಂಗ್ರೆಸ್ ಸಂವಿಧಾನದ ಆಶಯಗಳಿಗೆ ಅಪಚಾರ ಮಾಡುತ್ತಿದೆ ಎಂದು ರವಿ ಹೇಳಿದರು.
ಬೆಂಗಳೂರು: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ, ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಬದಲಾಗಿದೆ, ಅಧಿಕಾರದಲ್ಲಿರುವ ಕಾಂಗ್ರೆಸ್ ಮುಖಂಡರಿಗೆ ಒಂದು ಕಾನೂನು ಮತ್ತು ಕಾಂಗ್ರೆಸ್ಸೇತರ ಪಕ್ಷಗಳ ಮುಖಂಡರಿಗೆ ಮತ್ತೊಂದು ಕಾನೂನು, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತನ್ನ ವಿರುದ್ಧ ನೀಡುವ ದೂರು ಕೂಡಲೇ ಸ್ವೀಕೃತವಾಗುತ್ತದೆ ಮತ್ತು ಮತ್ತು ಎಫ್ಐಆರ್ ಸಹ ದಾಖಲಾಗುತ್ತದೆ, ಆದರೆ ತಾನು ಪೋಲೀಸ್ ಸ್ಟೇಷನ್ ನಲ್ಲಿ ತನ್ನ ಮೇಲೆ ನಡೆದ ಹತ್ಯೆ ಯತ್ನ ಮತ್ತು ಪೊಲೀಸ್ ದೌರ್ಜನ್ಯದ ಬಗ್ಗೆ ಡಿಸೆಂಬರ್ 19ರಂದು ದೂರು ನೀಡಿದ್ದರೂ, ಸಿಒಡಿ ಅಧಿಕಾರಿ ಮತ್ತು ಡಿಜಿಪಿ-ಐಜಿ ಇಬ್ಬರೂ ತಮ್ಮ ಗಮನಕ್ಕೆ ಬಂದಿಲ್ಲವೆನ್ನುತ್ತಾರೆ ಎಂದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಡಿಜಿಪಿ ಅಲೋಕ್ ಮೋಹನ್ಗೆ ಸಿಟಿ ರವಿ ದೂರು: ಡಿಕೆ ಶಿವಕುಮಾರ್, ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಆರೋಪ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
